ಬೆಳ್ತಂಗಡಿ: ಖಾಸಗಿ ಎಂಜಿನಿಯರಿಂಗ್ ಪದವಿ ಕಾಲೇಜುಗಳಲ್ಲಿ ಸೀಟ್ ಪಡೆಯಲು ಕಾಮೆಡ್-ಕೆ ನಡೆಸಿದ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಶಿಶಿರ್ ಹೆಚ್ ಶೆಟ್ಟಿ ಮೊದಲ (1 Rank)ರ್ಯಾಂಕ್ ಗಳಿಸಿದ್ದಾರೆ.
ರಾಷ್ಟ್ರದಾದ್ಯಂತ 1,13,111 ವಿದ್ಯಾರ್ಥಿಗಳು ಬರೆದ ಈ ಪರೀಕ್ಷೆಯನ್ನು ಬರೆದಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜ್ ಗಮನಾರ್ಹ ಸಾಧನೆ ಮಾಡಿದೆ. ಮೂಡುಬಿದಿರೆ ಹರೀಶ ಶೆಟ್ಟಿ ಮತ್ತು ಸುಮಿತಾ ಶೆಟ್ಟಿ ಮಗನಾದ ಶಿಶಿರ್ ಹೆಚ್. ಶೆಟ್ಟಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 664 ನೇ ಸ್ಥಾನ. ಜೆ.ಇ.ಇ ಮೈನ್ಸ್ ನಲ್ಲಿ 99.971 ಪರ್ಸಂಟೈಲ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆಯಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ 4ನೇ ರ್ಯಾಂಕ್, ಕರ್ನಾಟಕ ಪರೀಕ್ಷಾ ಮಂಡಳಿ ನಡೆಸಿದ ದ್ವಿತಿಯ ಪಿಯುಸಿಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ (593 ಅಂಕಗಳು) ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ.
ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳು, ಉತ್ಕೃಷ್ಟ ಸಾಧನೆ ತೋರಿಸಿದ್ದು ಬೋರ್ಡ್ ಪರೀಕ್ಷೆಯಲ್ಲಿ ಒಟ್ಟು 15 ಥ್ಯಾಂಕ್ಗಳು, ಜೆಇಣ ಅಡ್ವಾನ್ಸ್ನಲ್ಲಿ ರಾಷ್ಟ್ರಮಟ್ಟದಲ್ಲಿ 5000 ರ್ಯಾಂಕ್ ನ ಒಳಗೆ 6 ವಿದ್ಯಾರ್ಥಿಗಳು, ಸಿಇಟಿಯಲ್ಲಿ ನಾನಾ ವಿಭಾಗಗಳಲ್ಲಿ 100 ರೊಳಗೆ 13 ರ್ಯಾಂಕ್, 500 ರೊಳಗೆ 38ರ್ಯಾಂಕ್, 1000 ರೊಳಗೆ 64 ರ್ಯಾಂಕ್ ಪಡೆದು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಕ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ಅರ್ಹತೆ ಗಳಿಸಿದ್ದಾರೆ. ಎನ್.ಡಿ.ಎ., ನಾಟ ಲಿಖಿತ ಪರೀಕ್ಷೆಗಳಲ್ಲಿ ಸಂಸ್ಥೆಯ 9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ರಾಷ್ಟ್ರೀಯ ಮೆರಿಟೈಮ್ ಯೂನಿವರ್ಸಿಟಿ ಮುಕ್ತ ಸ್ಪರ್ಧೆಯಲ್ಲಿ 124ನೇ ಸ್ಥಾನ ಪಡೆಯುದರೊಂದಿಗೆ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆ ಗುಣಮಟ್ಟದ ಶಿಕ್ಷಣದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ದಾಖಲೆ ಫಲಿತಾಂಶವನ್ನು ಸಾಧಿಸಿದೆ.
ಅತ್ಯುತ್ತಮ ದಾಖಲೆಗಳೊಂದಿಗೆ ರಾಷ್ಟ್ರಮಟ್ಟದಲ್ಲಿ 1ನೇ ರಾಂಕ್ ಪಡೆದಿರುವ ಶಿಶಿರ್ ಹೆಚ್ ಶೆಟ್ಟಿ ಇವರನ್ನು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಸಾಧನೆ ಬಗ್ಗೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಕಾರ್ಯದರ್ಶಿ ರಶ್ಮಿತಾ ಜೈನ್ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ. ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಮನೋಜ್ ಕುಮಾರ್,
ಸ್ಪರ್ಧಾತ್ಮಕ ಪರೀಕ್ಷೆಗಳ ವಿಭಾಗದ ಮುಖ್ಯಸ್ಥರಾದ ರಾಮಮೂರ್ತಿ, ಕಾ, ದಯಾನಂದ, ವಿದ್ಯಾರ್ಥಿಯ ತಂದೆ ಹರೀಶ್ ಶೆಟ್ಟಿ ಇವರು ಉಪಸ್ಥಿತರಿದ್ದರು. ಉಪನ್ಯಾಸ ವಿಕ್ರಮ ನಾಯಕ್ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಮಗನ ಸಾಧನೆ ಸಂತಸ ತಂದಿದೆ: ಸುಮಿತಾ ಶೆಟ್ಟಿಯವರು ಮಗನ ಕಲಿಕೆಗೆ ಸಂಬಂಧಿಸಿದ ಎಲ್ಲಾ ಸಂದೇಹಗಳನ್ನು ತಡರಾತ್ರಿಯವರೆಗೂ ತಾಳ್ಮೆಯಿಂದ ಕೇಳಿ ಪರಿಹರಿಸಿದ ಮೂಡುಬಿದಿರೆ ಎಕ್ಸಲೆಂಟ್ ಎಲ್ಲಾ ಉಪನ್ಯಾಸಕ ವೃಂದದವರನ್ನು ಸದಾ ಬೆಂಬಲಿಸುತ್ತಿದ್ದ, ಪ್ರೋತ್ಸಾಹ ಕೊಡುತ್ತಿದ್ದ, ಸಂಸ್ಥೆಯ ಅಧ್ಯಕ್ಷರಿಗೆ, ಕಾರ್ಯದರ್ಶಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ರ್ಯಾಂಕ್ ಸಂತಸ ತಂದಿದೆ: ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ಓದಿಗೆ ಪೂರಕ ವಾತಾವರಣವಿದೆ. ಅನುಭವೀ ಉಪನ್ಯಾಸಕರು ಶಿಸ್ತುಬದ್ಧ ವ್ಯವಸ್ಥೆ, ಹಸಿರ ವಾತಾವರಣ, ಪೂರಕ ವೇಳಾಪಟ್ಟಿ ನನ್ನ ಯಶಸ್ಸಿಗೆ ಕಾರಣವಾಯಿತು. ಮುಂದೆ ಐಐಎಸ್ಸಿ ಮೂಲಕ ಬಿಟೆಕ್ ಮಾಡುವ ಉದ್ದೇಶವಿದೆ. ಥ್ಯಾಂಕ್ಯೂ ಯೂ ಎಕ್ಸಲೆಂಟ್ ಮೂಡುಬಿದಿರೆ ಎಂದು ಶಿಶಿರ್ ಶೆಟ್ಟಿ ಹೇಳಿದರು.
ಶಿಶಿರ್ ಶೆಟ್ಟಿ ಸಾಧನೆ ಸಂತೋಷ ಕೊಟ್ಟಿದೆ: ಎಕ್ಸಲೆಂಟ್ ಮೂಡುಬಿದಿರೆ ಕಳೆದ 13 ವರ್ಷಗಳಿಂದ ಗುರುಕುಲ ಮಾದರಿ ಶಿಕ್ಷಣದೊಂದಿಗೆ ಪಠ್ಯದ ಜೊತೆ ಸಂಸ್ಕಾರಯುತ ಶಿಕ್ಷಣಕ್ಕೆ ಪ್ರಾಶಸ್ತ್ರ ಕೊಡುತ್ತಾ ಬಂದಿದೆ. ಮೂರು ದಶಕಗಳಿಗಿಂತಲೂ ಹೆಚ್ಚಿನ ಅನುಭವ ಇರುವ ಉಪನ್ಯಾಸಕರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಜೊತೆಗೆ, ವ್ಯವಸ್ಥಿತ ವೇಳಾಪಟ್ಟಿ ಈ ಯಶಸ್ಸನ್ನು ತಂದುಕೊಟ್ಟಿದೆ. ಯುವರಾಜ್ ಜೈನ್ ಅಧ್ಯಕ್ಷ ಎಕ್ಸಲೆಂಟ್ ಮೂಡುಬಿದಿರೆ ಅಭಿಪ್ರಾಯ ವ್ಯಕ್ತಪಡಿಸಿದರು.