ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಆರ್ಥಿಕ ನೆರವು

0

ಕೊಕ್ಕಡ: ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಯ ಕಾಮಗಾರಿಯು ನಡೆಯುತ್ತಿದ್ದು, ಇದರ ಸದುಪಯೋಗಕ್ಕಾಗಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ವತಿಯಿಂದ ಸುಮಾರು 1,08,802 ಮೊತ್ತದ ಚೆಕ್ಕನ್ನು ಜೂ.11ರಂದು ಶ್ರೀ ರಾಮ ಸೇವಾ ಮಂದಿರದಲ್ಲಿ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು ಹಾಗೂ ಸದಸ್ಯರಾದ ಧರ್ಣಪ್ಪ ಕೆಂಪಕೋಡಿ, ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ ಅಧ್ಯಕ್ಷ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿ ಶಶಿ ಕೊಕ್ಕಡ, ಕೋಶಾಧಿಕಾರಿ ಪಣಿರಾಜ್ ಜೈನ್, ಸದಸ್ಯರಾದ ರೂಪೇಶ್ ಕುಮಾರ್, ಕೀರ್ತನ್ ಭಂಡಾರಿರವರಿಗೆ ಹಸ್ತಾಂತರಿಸಿದರು. ಈ ಹಿಂದೆಯೂ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಅನುದಾನವನ್ನು ನೀಡಿತ್ತು. ಹಾಗೂ ಅನೇಕ ಸೇವಾ ಕಾರ್ಯಗಳನ್ನು ಟ್ರಸ್ಟ್ ಮಾಡುತ್ತಾ ಬಂದಿರುತ್ತದೆ.

LEAVE A REPLY

Please enter your comment!
Please enter your name here