Site icon Suddi Belthangady

ಉಜಿರೆ ಗ್ರಾಮ ಪಂಚಾಯತಿನಲ್ಲಿ ಪೊಲೀಸ್ ಇಲಾಖೆ, ವರ್ತಕರ ಸಂಘದ ಸಭೆ

ಉಜಿರೆ: ಗ್ರಾಮ ಪಂಚಾಯತ್ ವ್ಯಾಪ್ತಿಯ ಉಜಿರೆ ಪೇಟೆ ಪರಿಸರದಲ್ಲಿ ವಿವಿದ ಅಂಗಡಿ ಮಳಿಗೆಗಳಿಂದ ಕಳ್ಳತನ ಪ್ರಕರಣಗಳು ನಡೆಯುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ ವತಿಯಿಂದ ಬೆಳ್ತಂಗಡಿ ಪೊಲೀಸ್ ಇಲಾಖೆ ಹಾಗೂ ಉಜಿರೆ ವಾಣಿಜ್ಯ ಉದ್ಯಮಿಗಳ ಸಂಘದ ಸದಸ್ಯರೊಂದಿಗೆ ಜೂ. 12ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಅಧ್ಯಕ್ಷತೆ ವಹಿಸಿದ್ದರು. ಸಮಾಲೋಚನಾ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಬೆಳ್ತಂಗಡಿ ಪೋಲಿಸ್ ಠಾಣಾ ಸರ್ಕಲ್ ಇನ್ಸ್ ಪೆಕ್ಟರ್ ಸುಬ್ಬಪುರ್ ಮಠ ಹಾಗೂ ಸಿಬ್ಬಂದಿಗಳು ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಉಜಿರೆಯ ಎಲ್ಲಾ ಅಂಗಡಿ ಮಾಲೀಕರು ತಮ್ಮ ಕಟ್ಟಡಗಳಿಗೆ ಹಾಗೂ ಉಜಿರೆಯ ಮೂರು ಮುಖ್ಯ ರಸ್ತೆಗಳಿಗೆ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸುವ ಬಗ್ಗೆ ನಿರ್ಮಾಣಗೊಳಿಸಲಾಯಿತು. ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಮಾತನಾಡಿ ಇನ್ನೂ ಮುಂದೆ ಉಜಿರೆ ಪೇಟೆಯಲ್ಲಿ ಕಳ್ಳತನ ನಡೆಯದಂತೆ ಮುಂಜಾಗೃತ ಕ್ರಮವಾಗಿ ವರ್ತಕರ ಸಂಘ ಸೂಕ್ತ ಕ್ರಮಗೊಳ್ಳುವುದು ಹಾಗೂ ಸಂಘಕ್ಕೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸಹಕಾರ ನೀಡುವುದಾಗಿ ಸಭೆಗೆ ತಿಳಿಸಿದರು.

Exit mobile version