Site icon Suddi Belthangady

ನಿಡಿಗಲ್ ಶ್ರೀ ಸತ್ಯನಾರಾಯಣ ಮಂದಿರದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್, ಕೊಡೆ ವಿತರಣೆ

ನಿಡಿಗಲ್: ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿನ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಉಜಿರೆಯ ಲಕ್ಷ್ಮಿ ಗ್ರೂಪ್ಸ್ ಕನಸಿನ ಮನೆಯ ಮಾಲಕರು ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಾರ್ಗದರ್ಶಕ ಮೋಹನ್ ಕುಮಾರ್ ಸುಮಾರು 25 ಮಕ್ಕಳಿಗೆ ಸ್ಕೂಲ್ ಬ್ಯಾಗ್ ಮತ್ತು ಕೊಡೆಯನ್ನು ವಿತರಿಸಿದರು.

ಕಲ್ಮಂಜ ಪ್ರೌಢ ಶಾಲೆಯ ಅತ್ಯುತ್ತಮ ಸಾಧಕ ವಿದ್ಯಾರ್ಥಿನಿ ಶ್ರಾವ್ಯರಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನವನ್ನು ನೀಡಿ ಅಭಿನಂದಿಸಿದರು. ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಸಂಯೋಜಕ ಕೆ.ಮಂಜುನಾಥ ಶೆಟ್ಟಿ, ಸಲಹಾಗಾರ ವೇಣುಗೋಪಾಲ ಗೌಡ, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Exit mobile version