Site icon Suddi Belthangady

ಜೂ.17: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ ಉದ್ಘಾಟನೆ

ಬೆಳ್ತಂಗಡಿ: ಕಕ್ಕಿಂಜೆ ಶ್ರೀ ಕೃಷ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ ಹಾಗೂ ಬಿರ್ಲಾ ಫರ್ಟಿಲಿಟಿ ಮತ್ತು ಐ.ವಿ.ಎಫ್ ಸೆಂಟರ್ ಉದ್ಘಾಟನಾ ಸಮಾರಂಭ ಜೂ.17ರಂದು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ನಡೆಯಲಿದೆ.

ಮಂಗಳೂರು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಚಕ್ರಪಾಣಿ ಎಂ. ಉದ್ಘಾಟನೆ ಮಾಡಲಿದ್ದಾರೆ. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಮುರಳಿಕೃಷ ಇರ್ವತ್ರಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಸ್ವರ್ಣಲತಾ ಅವರು ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ಉದ್ಘಾಟನೆ ಮಾಡಲಿದ್ದಾರೆ. ಮಂಗಳೂರು ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಮುಖ್ಯ ಇನ್ಫರ್ಟಿಲಿಟಿ ಕನ್ಸಲ್ಟೆಂಟ್ ಡಾ. ಗೌರವ್ ಗುಜರಾತಿ ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟನೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತುಳು ಶಿವಳ್ಳಿ ಸಭಾ ಅಧ್ಯಕ್ಷ ರಾಜಪ್ರಸಾದ ಪೊಳ್ನಾಯ, ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ವಂದನಾ ಎಂ. ಇರ್ವತ್ರಾಯ ಉಪಸ್ಥಿತರಿರಲಿದ್ದಾರೆ.

Exit mobile version