ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

0

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತ್ತಕೋತ್ತರ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಮ್ಯೂಚುವಲ್ ಫಂಡ್ ಹಾಗೂ ಇತರೆ ಶೇರು ಮಾರುಕಟ್ಟೆಯ ಹೂಡಿಕೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಹೂಡಿಕೆ ತಜ್ಞ ಅರ್ವಿನ್ ಡಿಸೋಜ ವಿದ್ಯಾರ್ಥಿಗಳಿಗೆ ಹೂಡಿಕೆ ಮಾಡುವಾಗ ಯೋಚನೆ ಮಾಡಿ ವಿಮರ್ಶೆ ಮಾಡಿ ತುಲನಾತ್ಮಕ ಅಧ್ಯಯನದೊಂದಿಗೆ ಹೂಡಿಕೆ ಮಾಡಬೇಕಾಗುತ್ತದೆ. ಷೇರು ಮಾರುಕಟ್ಟೆಯಲ್ಲಿ ಪ್ರತಿದಿನ ಕ್ಷಣ ಕ್ಷಣಕ್ಕೂ ಏರಿಳಿತಗಳಾಗುತ್ತಿರುತ್ತವೆ. ಅದನ್ನು ಗಮನಿಸಿ ನಾವು ಹೂಡಿಕೆ ಮಾಡಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥ ಪದ್ಮನಾಭ ಕೆ. ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಚಾಲಕ ರವಿ ಎಮ್.ಎನ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಎಂ.ಕಾಂ.ನ ಅನನ್ಯ ಜೈನ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

LEAVE A REPLY

Please enter your comment!
Please enter your name here