ಉಜಿರೆ: ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಸಾಮರ್ಥ್ಯ ನಿರ್ಮಾಣ ಕಾರ್ಯಾಗಾರ’

0

ಉಜಿರೆ: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ “ಸಾಮರ್ಥ್ಯ ನಿರ್ಮಾಣ” ವಿಷಯದ ಅಧಿವೇಶನವನ್ನು ಇತ್ತೀಚೆಗೆ ಆಯೋಜಿಸಿತು. ಈ ಅಧಿವೇಶನವನ್ನು ಎಸ್.ಡಿ.ಎಂ.ಪದವಿ ಕಾಲೇಜಿನ ನಿವೃತ್ತ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಂಶುಪಾಲ ಕುಮಾರ ಹೆಗಡೆ ಬಿ.ಎ. ನಡೆಸಿಕೊಟ್ಟರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಮರ್ಥ್ಯ ನಿರ್ಮಾಣದ ಮಹತ್ವವನ್ನು ಹೇಳಿದರು. ವಿದ್ಯಾರ್ಥಿಗಳು ತಮ್ಮ ಗುರಿಗಳನ್ನು ಸಾಧಿಸಲು ಅಗತ್ಯವಿರುವ ಕೌಶಲ್ಯಗಳು ಮತ್ತು ಸಾಮರ್ಥ್ಯಗಳನ್ನು ನಿರ್ಮಿಸುವ ವಿವಿಧ ತಂತ್ರಗಾರಿಕೆಗಳನ್ನು ಹಲವಾರು ಉದಾಹರಣೆ ಮೂಲಕ ವಿವರಿಸಿದರು. ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಭಾಗವಹಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳಲ್ಲಿ ಪರಿಣಾಮಕಾರಿಯಾಗಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಪ್ರೇರೇಪಿಸಿದರು. ಗಣಿತ ಶಾಸ್ತ್ರ ವಿಭಾಗದ ಉಪನ್ಯಾಸಕ ಕೃಷ್ಣಪ್ರಸಾದ್ ಆರ್. ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here