
ಬೆಳಾಲು: ಜೂ.13ರಂದು ಸ.ಕಿ.ಪ್ರಾ ಶಾಲೆ ಪೆರಿಯಡ್ಕ ಬೆಳಾಲು ಇಲ್ಲಿ ಪ್ರಭಾತ್ ಸಂಸ್ಥೆ ಉಜಿರೆ ಇವರು ನಿರಂತರ ೧೪ ವರ್ಷಗಳಿಂದ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಒದಗಿಸುತ್ತಾ ಬಂದಿದ್ದು ಇದರ ವಿತರಣಾ ಸಮಾರಂಭ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಪುಷ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಭಾತ್ ಸಂಸ್ಥೆಯ ಮಾಲಕರಾದ ಪ್ರಿಯಾಂಕ ಪ್ರವೀಣ್ ಭಟ್ ಹಾಗೂ ಅವರ ಹೆತ್ತವರು, ಬೆಳಾಲು ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ ಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಎಳ್ಳುಗದ್ದೆ, ಹಳೆಪೇಟೆ ಉಜಿರೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ ಕೆ.ಎಂ. ಇವರು ಭಾಗವಹಿಸಿದರು.

ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮಕ್ಕೆ ಶಾಲಾ ಮುಖ್ಯ ಶಿಕ್ಷಕಿ ವಿಜಯ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದಾನಿಗಳಿಗೆ ಶಾಲಾ ವಿದ್ಯಾರ್ಥಿಗಳಾದ ಚಾರ್ವಿ ಹಾಗೂ ಚರಿತ ಕೃತಜ್ಞತೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಭಾತ್ ಸಂಸ್ಥೆಯ ಮಾಲಕರಾದ ಪ್ರಿಯಾಂಕ ಪ್ರವೀಣ್ ಭಟ್ ಇವರನ್ನು ಶಾಲೆಯ ಪರವಾಗಿ ಗೌರವಿಸಲಾಯಿತು.

ಸಹ ಶಿಕ್ಷಕಿ ಜಯಶ್ರೀ ಬಿ.ಕೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ನಿಕಟಪೂರ್ವ ಅಧ್ಯಕ್ಷರಾದ ಸಂತೋಷ ಮಡಿವಾಳ, ಎಸ್.ಡಿ.ಎಂ. ಸಿ ಸದಸ್ಯರಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.