ರಾಷ್ಟ್ರೀಯ ಹೆದ್ದಾರಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಹುದ್ದೆಯಿಂದ ನಿವೃತ್ತಿ ಪಡೆದ ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ: ಬದುಕಿನ 60ವರ್ಷ ಪೂರೈಸಿದ ಶಿವ ಪ್ರಸಾದ್ ಅಜಿಲ‌ ದಂಪತಿಗಳಿಗೆ ಷಷ್ಟ್ಯಬ್ದ ಮಹೋತ್ಸವ

0

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ದಕ್ಷ ಸೇವೆ, ರಾಷ್ಟ್ರೀಯ ಹೆದ್ದಾರಿ ಇಲಾಖೆಯಲ್ಲಿ 3 ವರ್ಷಗಳಿಂದ ಕಾರ್ಯನಿರ್ವಾಹಕ ಇಂಜಿನಿಯರ್ ರಾಗಿ ಪದೋನ್ನತಿ ಹೊಂದಿ ಮೇ. 31ರಂದು ಸೇವಾ ನಿವೃತ್ತಿ ಜೊತೆ ಬದುಕಿನ 60 ಸಂವತ್ಸರ ಪೂರೈಸಿದ ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನದ ಆಡಳಿತ‌ದಾರರಾದ ಶಿವಪ್ರಸಾದ್ ಅಜಿಲರಿಗೆ ಪೌರಸನ್ಮಾನ ಹಾಗೂ ಷಷ್ಟ್ಯಬ್ದ ಮಹೋತ್ಸವ ನೆರವೇರಿತು. ಜೂ.14ರಂದು ಅಳದಂಗಡಿಯ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ನಾಗರಿಕ ಸನ್ಮಾನ ಸಮಿತಿ ಆಯೋಜಿಸಿದ ಸಮಾರಂಭಕ್ಕೆ ಶಿವಪ್ರಸಾದ್ ಅಜಿಲ ದಂಪತಿಗಳನ್ನು ಅಜಿಲ ಅರಮನೆಯಿಂದ ತೆರೆದ ಜೀಪಿನಲ್ಲಿ ಭವ್ಯ ಮೆರವಣಿಗೆಯೊಂದಿಗೆ ಕರೆತರಲಾಯಿತು.

ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಗೌರವಾಧ್ಯಕ್ಷತೆ ವಹಿಸಿದ್ದರು ಲೋಕಸಭಾ ಸದಸ್ಯ ಕ್ಯಾ| ಬ್ರಿಜೇಶ್ ಚೌಟ ಕಾರ್ಯಕ್ರಮ ಉದ್ಘಾಟಿಸಿದರು. ಮೂಡಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಹಾಗೂ ಕಾಸರಗೋಡು ಎಡನೀರು ಮಠ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀವರ್ಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ ಪ್ರತಾಪ್ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ ಹರೀಶ್ ಕುಮಾರ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ,ನಾಗರಿಕ ಸೇವಾ ಸಮಿತಿ ಕಾರ್ಯದರ್ಶಿ ಪಿ ಹೆಚ್ ನಿತ್ಯಾನಂದ ನೊಚ್ಚ ಉಪಸ್ಥಿತರಿದ್ದರು.

ಶ್ರೀ ಸತ್ಯದೇವತೆ ದೇವಸ್ಥಾನದ ವತಿಯಿಂದ ಆಯೋಜಿಸಿದ 22 ನೇ ವರ್ಷದ 7000 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏಷ್ಯನೆಟ್ ಸುವರ್ಣ ವಾಹಿನಿಯ ಪ್ರಧಾನ ಸಂಪಾದಕರಾದ ಅಜಿತ್ ಹನುಮಕ್ಕನವರ್ ನಡೆಸಿಕೊಟ್ಟರು.

ಕಾರ್ಯಕ್ರಮ‌ ನಿರ್ವಹಣೆ ಅಜಿತ್ ಕುಮಾರ್ ಕೊಕ್ರಾಡಿ, ಸಮೀಕ್ಷಾ ಶಿರ್ಲಾಲು,ಪ್ರಾರ್ಥನೆ ಶ್ರೇಯಾ ದೇವಾಡಿಗ ಮಾಡಿದರು. ನಾಗರಿಕ ಸನ್ಮಾನ ಸಮಿತಿ ಅಧ್ಯಕ್ಷರಾದ ಗಂಗಾಧರ್ ಮಿತ್ತಮಾರು ಸ್ವಾಗತ ಭಾಷಣ, ಸಂಚಾಲಕರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

LEAVE A REPLY

Please enter your comment!
Please enter your name here