ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

0

ಬೆಳ್ತಂಗಡಿ: ಧರ್ಮಪ್ರಾಂತ್ಯದ ಅಡಿಯಲ್ಲಿರುವ ಎಲ್ಲ ಶಾಲಾ ಅಧ್ಯಾಪಕರ ಪುನಃಚೇತನ ಶಿಬಿರವು ಜೂ.14ರಂದು ಧರ್ಮಪ್ರಾಂತ್ಯದ ಪಾಲನಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕರ್ನಾಕಟ ರಾಜ್ಯ ಅಧ್ಯಾಪಕ ಪ್ರಶಸ್ತಿ ವಿಜೇತ ರಾಜೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ಬೆಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಮೆಂಬರ್ ಹಾಗು ಕರ್ನಾಟಕ ಕಥೊಲಿಕ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಯಾಗಿ ಫಾ. ಫ್ರಾನ್ಸಿಸ್ ಅಲ್ಮೇಡಾ ಅಧ್ಯಾಪಕ ವೃತ್ತಿಯ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು.

“ಕಾಲಕ್ಕನುಗುಣವಾಗಿ ಅಧ್ಯಾಪಕರು ಬದಲಾಗಬೇಕಾಗಿದೆ. ಮಕ್ಕಳ ಈ ಕಾಲದ ವರ್ತನೆಗಳನ್ನು ತಿಳಿದು ಅವರಿಗೆ ಬೇಕಾದ ರೀತಿಯಲ್ಲಿ ಶಿಕ್ಷಣ ನೀಡುವುದು ಅಗತ್ಯ. ಕೋವಿಡ್ 19 ನಂತರ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿವೆ. ಅವುಗಳನ್ನು ಅರಿತು ಬಗೆಹರಿಸುವುದು ಅಗತ್ಯದ ಕಾರ್ಯವಾಗಿದೆ” ಎಂದು ಶಿಬಿರವನ್ನು ಉದ್ಗಾಟಿಸಿ ಮಾತನಾಡಿದ ಲಾರೆನ್ಸ್ ಮುಕ್ಕುಯಿಯವರು ಹೇಳಿದರು.

ಶಿಬಿರದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ನೂರು ಶತಮಾನ ಫಲಿತಾಂಶವನ್ನು ಪಡೆದ ಬಂಗಾಡಿ, ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಾಪಕರನ್ನು, ಅದೇ ಶಾಲೆಯಲ್ಲಿ ಹಿಂದಿ ಅಧ್ಯಾಪಕಿ ಸುಲೋಚನಾ ರವರನ್ನು ಹಿಂದಿ ವಿಷಯದಲ್ಲಿ ಮಕ್ಕಳ ಅಸಾಧಾರಣ ಸಾಧನೆಯನ್ನು ಪರಿಗಣಿಸಿ ಆದರಿಸಲಾಯಿತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಫಾ. ಶಾಜಿ ಮಾತಿಯೂ ಶಿಬಿರವನ್ನು ಸಮನ್ವಯಗೊಳಿಸಿದರು. ಶಿಬಿರದಲ್ಲಿ 50ಕ್ಕೂ ಹೆಚ್ಚು ಅಧ್ಯಾಪಕರು ಬಾಗವಹಿಸಿದರು.

LEAVE A REPLY

Please enter your comment!
Please enter your name here