Site icon Suddi Belthangady

ಕುಂಜತ್ತೋಡಿಯಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ಕುಂಜತ್ತೋಡಿ: ಡಾ! ಬಿ.ಆರ್. ಅಂಬೇಡ್ಕರ್ ಸಮಾಜ ಸೇವಾ ಸಂಘ ಬೆರ್ಕಳ ಹಾಗೂ ಸುಧಾಕರ ಶೆಣೈ ಖಂಡಿಗ ಕಜೆಕಾರು ಅಧ್ಯಕ್ಷ, ಕಿಸಾನ್ ಘಟಕ ಬ್ಲಾಕ್ ಕಾಂಗ್ರೇಸ್ ಬಂಟ್ವಾಳ ಇವರ ಸಹಯೋಗದೊಂದಿಗೆ ದ.ಕ. ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಜತ್ತೋಡಿಯಲ್ಲಿ ಎಲ್ಲಾ ಮಕ್ಕಳಿಗೆ ಪ್ರಥಮ ವರ್ಷದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಜೂ. 2ರಂದು ಕುಂಜತ್ತೋಡಿ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಸತ್ಯ ಶೋಧಕ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷ ಸುಕೇಶ್ ಮಾಲಾಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾನಾಡಿ ವಿದ್ಯಾರ್ಥಿಗಳು ಈಗಿನಿಂದಲೇ ಒಂದು ಗುರಿಯನ್ನು ಇಟ್ಟುಕೊಳ್ಳಿ, ಭವಿಷ್ಯದಲ್ಲಿ ಉನ್ನತ ಸ್ಥಾನವಾದ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಯಾಗಿ ನಮ್ಮ‌ ಊರಿನ ವಿದ್ಯಾರ್ಥಿಗಳು ಕಾರ್ಯನಿರ್ವಹಿಸಬೇಕು. ವಿದ್ಯಾರ್ಥಿಗಳ‌ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಡಾ! ಅಂಬೇಡ್ಕರ್ ಸಮಾಜ ಸೇವಾ ಸಂಘದ ಸದಸ್ಯರ ಕಾರ್ಯ ನಿಜಕ್ಕೂ ಮೆಚ್ಚುವಂತದ್ದು ಇಂತಹ ಸಮಾಜಮುಖಿ ಕಾರ್ಯಕ್ಕೆ ಸತ್ಯ ಶೋಧಕ ತಂಡದ ಸಹಕಾರ ಇದ್ದೇ ಇರುತ್ತದೆ ಎಂದು ತಿಳಿಸಿದರು.

ವೇದಿಕೆಯಲ್ಲಿದ್ದ ಕುಂಜತ್ತೋಡಿ ಶಾಲೆಯ ಸಹ ಶಿಕ್ಷಕಿ ಗೀತಾ ಮಾತಾನಾಡಿ ಮುಂದಿನ ದಿನಗಳಲ್ಲಿ ಉನ್ನತ ವಿದ್ಯಾಬ್ಯಾಸಕ್ಕಾಗಿ ಸರಕಾರದಿಂದ ಸಿಗುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.‌ ಅಧ್ಯಕ್ಷತೆ ವಹಿಸಿಕೊಂಡಿದ್ದ ಸಮಿತಿಯ ಅಧ್ಯಕ್ಷ ದಿನೇಶ್ ಬೆರ್ಕಳ ಮಾತನಾಡಿ ಇದು ನಮ್ಮ ಪ್ರಥಮ‌ ವರ್ಷದ ಕಾರ್ಯಕ್ರಮ‌ ಇದನ್ನು ಮುಂದಿನ ವರ್ಷಗಳಿಂದಲೂ ಮುಂದುವರಿಸುತ್ತಾ ಹೋಗುತ್ತೇವೆ. ಈ ಶಾಲೆಗೆ ಇನ್ನಷ್ಟು ವಿದ್ಯಾರ್ಥಿಗಳು ಬರುವಂತಾಗಲಿ ನಮ್ಮ ಸಮಿತಿಯ ಪರವಾಗಿ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ, ಎಸ್.ಡಿ.ಎಮ್.ಸಿ ಅಧ್ಯಕ್ಷೆ ನವೀನಾಕ್ಷಿ, ಸಂಘದ ಕಾರ್ಯದರ್ಶಿ ವಸಂತ, ದಾನಿಗಳಾದ ಸುಧಾಕರ ಶೆಣೈ ಉಪಸ್ಥಿತರಿದ್ದರು. ಶಿಕ್ಷಕಿ ಸುಮಲತಾ ಸ್ವಾಗತಿಸಿದರು. ದಿನೇಶ್ ವಂದಿಸಿದರು.

Exit mobile version