Site icon Suddi Belthangady

ಮುಂಡಾಜೆ: ಪ್ರಾ.ಕೃ.ಪ.ಸ. ಸಂಘದಿಂದ ಎನ್.ಎಸ್.ಗೋಖಲೆ ಸಂಸ್ಮರಣ ವಿದ್ಯಾನಿಧಿ ವಿತರಣೆ

ಮುಂಡಾಜೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸದಸ್ಯರ ಮಕ್ಕಳಿಗೆ ಎನ್.ಎಸ್.ಗೋಖಲೆ ಸಂಸ್ಮರಣ ವಿದ್ಯಾನಿಧಿ ವಿತರಣೆ ಕಾರ್ಯಕ್ರಮ ಜೂ.14ರಂದು ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆನರಾ ಬ್ಯಾಂಕ್ ನ ನಿವೃತ್ತ ಅಧಿಕಾರಿ ವಾಸುದೇವ ಗೋಖಲೆ ಮಾತನಾಡಿ “ನಾವು ಎಲ್ಲೇ ಇದ್ದರೂ ನಮ್ಮ ಊರಿಗೆ ನಮ್ಮಿಂದಾದ ಸೇವೆಯನ್ನು ಪ್ರೀತಿ, ವಿಶ್ವಾಸದಿಂದ ನೀಡಬೇಕು ಎಂದರು.

ಸಂಘದ ಅಧ್ಯಕ್ಷ ಪ್ರಕಾಶನಾರಾಯಣ ರಾವ್ ಮಾತನಾಡಿ ಆರ್ಥಿಕ ಸಂಕಷ್ಟದಿಂದ ಯಾರೂ ಕೂಡ ಶಿಕ್ಷಣ ವಂಚಿತರಾಗಬಾರದು. ಎಂಬ ಉದ್ದೇಶದಿಂದ ಸಂಘವು ರಿಯಾಯಿತಿ ಬಡ್ಡಿ ದರದಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಉನ್ನತ ವ್ಯಾಸಂಗಕ್ಕೆ ವಿದ್ಯಾಭ್ಯಾಸ ಸಾಲ ನೀಡುವ ಹೊಸ ಯೋಜನೆ ರೂಪಿಸಿದೆ. ಸಂಘದ ಸದಸ್ಯರಿಗೆ ಮೈಲುತುತ್ತು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದನ್ನು ರಸಗೊಬ್ಬರಗಳಿಗೂ ವಿಸ್ತರಿಸುವ ಕುರಿತು ಯೋಜನೆ ರೂಪಿಸಲಾಗಿದೆ” ಎಂದರು.

ವೃತ್ತಿಪರ ನಿರ್ದೇಶಕ ಹಿರಿಯ ಸಹಕಾರಿ ನಾರಾಯಣ ಫಡಕೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ನಿರ್ದೇಶಕ ಕಜೆ ವೆಂಕಟೇಶ್ವರ ಭಟ್ ವಿದ್ಯಾಭ್ಯಾಸ ಸಾಲದ ಮಾಹಿತಿ ನೀಡಿದರು. ನಿರ್ದೇಶಕರಾದ ಅಜಯ್ ಕಲ್ಲಿಕಾಟ್, ಅಶ್ವಿನಿ ಎ.ಹೆಬ್ಬಾರ್, ರವಿ ಪೂಜಾರಿ, ಮೋಹಿನಿ, ಶಿವಪ್ರಸಾದ್, ಶಶಿಧರ ಕಲ್ಮಂಜ, ರಾಘವ ಕಲ್ಮಂಜ, ಸುಮಾ ಗೋಖಲೆ, ವೃತ್ತಿಪರ ನಿರ್ದೇಶಕ ಬಾಬುಗೌಡ ಉಪಸ್ಥಿತರಿದ್ದರು.

ನಿರ್ದೇಶಕ ಚೆನ್ನಕೇಶವ ಅರಸಮಜಲು ಸ್ವಾಗತಿಸಿದರು. ಸಿಇಒ ಪ್ರಸನ್ನ ಪರಾಂಜಪೆ ಹಾಗೂ ಕಕ್ಕಿಂಜೆ ಶಾಖೆ ಮ್ಯಾನೇಜರ್ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ರಾಘವ ಗೌಡ ಕುಡುಮಡ್ಕ ವಂದಿಸಿದರು.

Exit mobile version