ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಅಳದಂಗಡಿಯ ಗುರುದೇವ ಸಂಕೀರ್ಣದಲ್ಲಿ ಜೂ.15ರಂದು ಉದ್ಘಾಟನೆಗೊಂಡಿದೆ. 17ನೇ ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದರು ಭದ್ರತಾ ಕೋಶವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಅಳದಂಗಡಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಶ್ರೀ ಕ್ಲಿನಿಕ್ ಡಾ.ಎನ್. ಎಂ. ತುಳಪುಳೆ, ಕಟ್ಟಡ ಮಾಲಕ ಸಂಜೀವ ಪೂಜಾರಿ ಕೊಡಂಗೆ, ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್, ಅಳದಂಗಡಿ ಕೃಷಿಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಸುಭಾಷ್ ಚಂದ್ರ ರೈ, ಅಳದಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಸುಲ್ಕೇರಿಮೊಗ್ರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧೀರ್ ಸುವರ್ಣ, ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ವಿಠಲ ಚೇಳೂರು, ನಿರ್ದೇಶಕರಾದ ಸುಂದರ ಪೂಜಾರಿ, ರಮೇಶ್ ಅನ್ನ ಪಾಡಿ, ಗಿರೀಶ್ ಕುಮಾರ್, ಜಯಶಂಕರ್ ಕಾನ್ಸಾಲೆ, ಕೆ.ಸುಜಾತ ಎಮ್., ವಾಣಿ ವಸಂತ, ಅರುಣ್ ಕುಮಾರ್ ಎಂ, ಆಶಿಶ್ ಪೂಜಾರಿ, ಸುಚಿತ್ರಾ, ಚಿದಾನಂದ ಎಮ್. ಉಪಸ್ಥಿತರಿದ್ದರು.
ಸುಚಿತ್ರ ಪ್ರಾರ್ಥನೆ ಮಾಡಿದರು. ಸಂಜೀಪ ಮುನ್ನೂರು ಮೂರ್ತೆದಾರರ ಸಹಕಾರಿ ಸಂಘದ ನಿರ್ದೇಶಕ ಅರುಣ್ ಕುಮಾರ್ ಸ್ವಾಗತಿಸಿದರು.