ಕಳೆಂಜ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಪರಪ್ಪು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ಹಾಗೂ ಭಜನಾ ಪರಿಷತ್ ಇವುಗಳ ಸಹಯೋಗದಲ್ಲಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಪರಪ್ಪು ಇಲ್ಲಿ “ಕುಣಿತ ಭಜನಾ ತರಬೇತಿ” ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ಧರ್ಮ ಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕ್ಷೇಮ ಪಾಲನಾಧಿಕಾರಿ ಯುವರಾಜ ಪೂವನಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ವೇದಿಕೆಯಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಸೀಮುಳ್ಳು, ಭಜನಾ ಪರಿಷತ್ ರಾಜ್ಯ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಯೋಜನಾಧಿಕಾರಿ ಯಶೋಧರ್ ಕೆ., ಭಜನಾ ಪರಿಷತ್ ಬೆಳ್ತಂಗಡಿ ತಾಲೂಕಿನ ಅಧ್ಯಕ್ಷ ಹರೀಶ್, ಪರಪ್ಪು ಗುತ್ತು ಜಿನೇಂದ್ರ ಜೈ ನ್, ಗ್ರಾಮ ಪಂಚಾಯತ್ ಕಳೆಂಜ ಸದಸ್ಯ ನಿತ್ಯಾನಂದ ರೈ, ಭಜನಾ ತರಬೇತುದಾರರಾದ ಸಂದೇಶ ಸುವರ್ಣ ಹಾಗೂ ನಾಗೇಶ ಕೆ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಲಯದ ಮೇಲ್ವಿಚಾರಕ ರವೀಂದ್ರ ಬಿ. ಉಪಸ್ಥಿತರಿದ್ದರು.
ನಿತ್ಯಾನಂದ ರೈ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವರಾಜ ಪೂವನಿ, ಭಜನೆ ಮಹತ್ವ ವನ್ನು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಭಜನಾ ಪರಿಷತ್ ನ ರಾಜ್ಯಾಧ್ಯಕ್ಷ ಚಂದ್ರಶೇಖರ ಸಾಲಿಯನ್, ಭಜನಾ ತರಬೇತುದಾರರಾದ ಸಂದೇಶ ಸುವರ್ಣ ಹಾಗೂ ನಾಗೇಶ್ ಕೆ. ನಮ್ಮ ಸಂಸ್ಕೃತಿ ಹಾಗೂ ಧರ್ಮವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ. ಭಜನೆಯಿಂದ ವಿಭಜನೆ ಇಲ್ಲ. ಪ್ರತಿ ಮನೆಮನೆಯಲ್ಲೂ ಭಜನೆ ಪ್ರಾರಂಭಿಸುವವರೊಂದಿಗೆ ಹಿಂದಿನ ಭಜನಾ ಪರಂಪರೆಯನ್ನು ಉಳಿಸಿಕೊಂಡು ಬೆಳೆಸಬೇಕಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕಾರ್ಯ ಪ್ರವರ್ತರಾಗಬೇಕು. ಭಜನೆಯಿಂದ ಆಗುವ ಸತ್ ಪರಿಣಾಮ ಹಾಗೂ ಮಹತ್ವವನ್ನು ತಿಳಿಸಿದರು.
ಕೃಷಿ ಪತ್ತಿನ ಸಹಕಾರಿ ಸಂಘ ನಿಡ್ಲೆ ಅಧ್ಯಕ್ಷ ಧನಂಜಯ ಗೌಡ ವಳಚ್ಚಿಲ್, ಎಲ್. ಡಿ. ಬ್ಯಾಂಕ್ ನಿರ್ದೇಶಕ ಸಂತೋಷ್ ಕುಮಾರ್ ಜೈನ್ ಹಾಗೂ ಇತರ ಗಣ್ಯರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ವೇದಿಕ, ಅನುಪ್ರಿಯಾ ಹಾಗೂ ಅದಿತಿ ಪ್ರಾರ್ಥನೆ ಹಾಡಿದರು. ಛಾಯ ಸ್ವಾಗತಿಸಿದರು. ಸುರೇಶ್ ಶೆಟ್ಟಿ ನಿರೂಪಿಸಿದರು. ರಾಜೇಶ್ ಶೆಟ್ಟಿ ವಂದನಾರ್ಪಣೆ ಗೈದರು.