ಎಂಜಿರ: ಮನೆ ಮಂದಿ ಕೆಲಸಕ್ಕೆ ತೆರಳಿದ್ದ ಸಮಯದಲ್ಲಿ ಮನೆಯಲ್ಲಿದ್ದ ಚಿನ್ನಭಾರಣ ಕಳವು: ರೆಖ್ಯದ ಕಟ್ಟೆ ಆನಂದ ಗೌಡರ ಮನೆಯಲ್ಲಿ ನಡೆದ ಘಟನೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

0

ಕೊಕ್ಕಡ: ಮನೆಯ ಗೊದ್ರೆಜ್ ನಲ್ಲಿಟ್ಟಿದ ಚಿನ್ನಾಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಘಟನೆ ಜೂ.14 ರಂದು ಎಂಜಿರದಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಸಬ್ ಇನ್ಸೆಕ್ಟರ್ ಸಮರ್ಥ ಆರ್. ಗಾಣಿಗೇರ ಮತ್ತು ತಂಡ, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕುಸುಮರವರು ತನ್ನ ಗಂಡ ಆನಂದ ಗೌಡ ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮದ ಕಟ್ಟೆ ಎಂಬಲ್ಲಿ ವಾಸವಿದ್ದು ಇಬ್ಬರು ದಿನಾ ಬೆಳಿಗ್ಗೆ ಕೆಲಸಕ್ಕೆ ಮನೆಗೆ ಬೀಗ ಹಾಕಿ ಹೋಗುತ್ತಿದ್ದರು. ಕುಸುಮ ಬಳಿ ಸುಮಾರು 3 ಪವನ್ ತೂಕದ ಕರಿಮಣಿ ಸರ. ಸುಮಾರು 1 ಪವನ್ ತೂಕದ ಬಳೆ, ಸುಮಾರು 2 ಪವನ್ ತೂಕದ ಚಿನ್ನದ ಚೈನ್, ಸುಮಾರು ಅರ್ಧ ಪವನ್ ತೂಕದ ಒಂದು ಜೊತೆ ಕಿವಿಯೋಳೆ ಒಟ್ಟು ರೂ 2,60,000 ರೂಪಾಯಿ ಅಂದಾಜು ಮೌಲ್ಯದ 52 ಗ್ರಾಂ ಚಿನ್ನಾಭರಣವಿತ್ತು.

ಚಿನ್ನಾಭರಣವನ್ನು ಮೇ.23ರಂದು ಕೊನೆಯದಾಗಿ ನೋಡಿರುತ್ತಾರೆ. ಕುಸುಮ ಹಾಗೂ ಗಂಡ ಆನಂದ ಗೌಡ ಶಿರಾಡಿ ದೇವಸ್ಥಾನಕ್ಕೆ ಹೋಗುವ ಸಲುವಾಗಿ ಜೂ.14ರಂದು ಸಂಜೆ 6.30 ಗಂಟೆ ಸುಮಾರಿಗೆ ಗೊದ್ರೆಜ್ ನಲ್ಲಿಟ್ಟ ಚಿನ್ನಾಭರಣವನ್ನು ತೆಗೆಯಲು ಹೋದಾಗ ಗೊದ್ರೆಜಿಗೆ ಹಾಕಿದ್ದ ಕೀ ಹಾಕಿದ ಸ್ಥಿತಿಯಲ್ಲಿ ಇತ್ತು. ಗೊದ್ರೆಲ್ನಲ್ಲಿಟ್ಟಿದ್ದ ಚಿನ್ನಾಭರಣ ಯಾರೋ ಕಳ್ಳರು ಕಳವು ಮಾಡಿರುತ್ತಾರೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.15ರಂದು ಕುಸುಮ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here