ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಮಿತ ಪೂಜಾರಿರವರನ್ನು ಸಂಘದ ಮಾಸಿಕ ಸಭೆಯಲ್ಲಿ ಜೂ. 14ರಂದು ಗೌರವಿಸಲಾಯಿತು.
ಸಂಘದ ಆಧ್ಯಕ್ಷ ಜಯ ವಿಕ್ರಮ್ ಕಲ್ಲಾಪು, ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೇಶ್ ಎಚ್., ಕೋಶಾಧಿಕಾರಿ ಪ್ರಶಾಂತ್, ಯುವ ಬಿಲ್ಲವ ವೇದಿಕೆ ಯ ಅಧ್ಯಕ್ಷ ಎಂ.ಕೆ. ಪ್ರಸಾದ್, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಮಾಜಿ ಅಧ್ಯಕ್ಷರುಗಳಾದ ವಿನೋದಿನಿ ರಾಮಪ್ಪ, ರಾಜಶ್ರೀ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.