ಸುಲ್ಕೇರಿ: ಮುಲ್ಲಗುಡ್ಡೆಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜಾ ಭೇಟಿ

0

ಸುಲ್ಕೇರಿ: ಗ್ರಾಮದ ಮುಲ್ಲಗುಡ್ಡೆ ಎಂಬಲ್ಲಿ ವಿಪರೀತ ಮಳೆಯಿಂದ ಯಮುನಾರವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದಿದ್ದು, ಮನೆಯಲ್ಲಿ ಸದಸ್ಯರು ಅಪಾಯದಿಂದ ಪಾರಾಗಿದ್ದಾರೆ. ಜೂ. 15ರಂದು ಸದ್ರಿ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸರಕಾರದಿಂದ ತುರ್ತು ಪರಿಹಾರ ಒದಗಿಸುವುದಾಗಿ ತಿಳಿಸಿರುತ್ತಾರೆ.

ಸುಲ್ಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಕಾರ್ಯದರ್ಶಿ ಕೊರಗಪ್ಪ ನಾಯ್ಕ, ಮಾಜಿ ಅಧ್ಯಕ್ಷ ನಾರಾಯಣ ಪೂಜಾರಿ, ಪಂಚಾಯತ್ ಸದಸ್ಯ ರವಿ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here