Site icon Suddi Belthangady

ಗುರಿಪಳ್ಳ ಒಕ್ಕೂಟದಿಂದ ಶ್ರೀ ಲೋಕನಾಡು ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

ಗುರಿಪಳ್ಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಗುರಿಪಳ್ಳ ಒಕ್ಕೂಟದಿಂದ ಇತಿಹಾಸ ಪ್ರಸಿದ್ಧ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಿಥುನ ಸಂಕ್ರಮಣದ ಪ್ರಯುಕ್ತ ಜೂ.15ರಂದು ದೇವಳದ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ವಹಿಸಿದ್ದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸೇವಾಪ್ರತಿನಿಧಿ ಪುಷ್ಪ, ಒಕ್ಕೂಟದ ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ದೇವಸ್ಥಾನದ ವತಿಯಿಂದ ಫಲಹಾರದ ವ್ಯವಸ್ಥೆಯನ್ನು ಏರ್ಪಡಿಸಲಾಯಿತು.

Exit mobile version