Site icon Suddi Belthangady

ಮಲೆಬೆಟ್ಟುವಿನಲ್ಲಿ ಹೊರ ಆವರಣ ಕೃಷಿ ತರಬೇತಿ

ಮಲೆಬೆಟ್ಟು: ಕೃಷಿ ಇಲಾಖೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಮತ್ತು ಉಜಿರೆ ಗ್ರಾಮ ಪಂಚಾಯತ್ ಮಟ್ಟದ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದಲ್ಲಿ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ರೈತರ ಒಂದು ದಿನದ ಹೊರ ಆವರಣ ಕೃಷಿ ತರಬೇತಿಯು ಒಕ್ಕೂಟದ ಅಧ್ಯಕ್ಷೆ ವಿನುತ ರಜತ್ ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು.

ಕೃಷಿ ಅಧಿಕಾರಿ ಗಣೇಶ್ ಇಲಾಖಾ ಸೌಲಭ್ಯದಡಿ ಸಿಗುವ ಸವಲತ್ತುಗಳಿಗೆ ಉಂಟಾಗುವ ತಾಂತ್ರಿಕ ತೊಂದರೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿ ಇಲಾಖಾ ಮಾಹಿತಿ ನೀಡಿದರು. ಜಿಲ್ಲಾ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿ ಹಾಗೂ ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ತೆಂಗು ಬೆಳೆ ನಿರ್ವಹಣೆ ಮತ್ತು ಅಡಿಕೆ ಕೊಳೆ ರೋಗ ಪರಿಹಾರ ಬಗ್ಗೆ ಪ್ರಾತ್ಯಕ್ಷಿತ ಮೂಲಕ ರೈತರಿಗೆ ನೀಡಿದರು. ಒಕ್ಕೂಟದ ಕೃಷಿಸಖಿ ಭಾಗಿರಥಿ ನ್ಯಾಚುರಲ್ ಫಾರ್ಮಿಂಗ್ ಅರ್ಜಿಯ ಬಗ್ಗೆ, ಕಿಸಾನ್ ಸಮ್ಮಾನ್ ಯೋಜನೆ ಬಗ್ಗೆ, ಬೆಳೆ ಸಮೀಕ್ಷೆ ಬಗ್ಗೆ ಮಾಹಿತಿ ನೀಡಿದರು.

ಮಲೆಬೆಟ್ಟಿನ ಆಸುಪಾಸಿನ ರೈತರು ಆಸಕ್ತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದುಕೊಂಡಿರುತ್ತಾರೆ. ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯಿತಿನ ಸದಸ್ಯರಾದ ಅನಿಲ್ ಡಿಸೋಜ, ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ದೀಪ ಜಗದೀಶ್, ಒಕ್ಕೂಟದ ಸಿಬ್ಬಂದಿಗಳಾದ ಎಮ್.ಬಿ.ಕೆ ಸುಜಾತ, ಎಲ್.ಸಿ.ಆರ್.ಪಿ ಸಚಿತ, ಪಶುಸಖಿ ಏಕಲತಾ ಉಪಸ್ಥಿತರಿದ್ದರು. ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ಗೌಡ ಸ್ವಾಗತಿಸಿದರು. ಕೃಷಿಕ ಗೋಪಾಲಗೌಡ ಬಾಜಿಮಾರು ವಂದಿಸಿದರು.

Exit mobile version