ಧರ್ಮಸ್ಥಳ: ಪುದುವೆಟ್ಟು ಗ್ರಾಮದ ಬೊಳ್ಮನಾರ್ ಎಂಬಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಜೂ. 16ರಂದು ಧರ್ಮಸ್ಥಳ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ.
ಪೊಲೀಸ್ ಠಾಣಾ ಪಿಎಸ್ಐ ಸಮರ್ಥ ಆರ್ ಗಾಣಿಗೇರ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವ ಸಮಯದಲ್ಲಿ ಪುರುಷೋತ್ತಮ(40) ತನ್ನ ಮನೆಯ ಬಳಿ ಇರುವ ತೋಟದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯವನ್ನು ಶೇಖರಿಸಿಟ್ಟು ವ್ಯಾಪಾರ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದು ಆರೋಪಿಯ ಮನೆಯಿಂದ ಸ್ವಲ್ಪ ದೂರದಲ್ಲಿ ವಾಹನವನ್ನು ನಿಲ್ಲಿಸಿ, ಮನೆ ಬಳಿ ಇರುವ ತೋಟಕ್ಕೆ ನಡೆದುಕೊಂಡು ಹೋಗಿ ಅಲ್ಲಿದ್ದ ಆರೋಪಿಯನ್ನು ವಶಕ್ಕೆ ಪಡೆದು ಸ್ಥಳದಲ್ಲಿ ಶೋಧನಾ ಕಾರ್ಯ ನಡೆಸಲು ನ್ಯಾಯಾಲಯದಿಂದ ಸಮುಚಿತ ಆದೇಶ ಪಡೆಯಲು ಕಾಲಾವಕಾಶ ಇಲ್ಲದ ಕಾರಣ ಕರ್ನಾಟಕ ಅಬಕಾರಿ ಕಾಯಿದೆ ಅಧಿನಿಯಮ 1965 ರ 54 ಪ್ರಕರಣಾಧೀನ ಬರೆದ ಶೋಧನಾ ಸರ್ಚ್ ವಾರಂಟ್ ಗೆ ಪಂಚರ ಸಹಿ ಪಡೆದ ಬಳಿಕ ಆರೋಪಿಯನ್ನು ಕೂಲಂಕುಷವಾಗಿ ವಿಚಾರಿಸಿ ಅಲ್ಲಿಯೇ ಅಡಿಕೆ ಮರದ ಬುಡದ ಬಳಿಯಿದ್ದ ಪಿಸ್ತಾ ಬಣ್ಣದ ಪ್ಲಾಸ್ಟಿಕ್ ಗೋಣಿ ಕೈ ಚೀಲದಲ್ಲಿ ಮದ್ಯದ ಸ್ಯಾಚೆಟ್ಗಳು ಇರುವುದಾಗಿ ತಿಳಿಸಿದ್ದು, ಪಂಚರ ಸಮಕ್ಷಮದಲ್ಲಿ ಆರೋಪಿತನ ಅಂಗ ಜಪ್ತಿಮಾಡಿ ಬಳಿಕ ಪ್ಲಾಸ್ಟಿಕ್ ಗೋಣಿ ಕೈ ಚೀಲವನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ 90ML MYSORE LANCER Whisky ಎಂಬ ಹೆಸರಿರುವ ಒಟ್ಟು 54 ಸ್ಯಾಚೆಟ್ಗಳಲ್ಲಿ ಒಟ್ಟು 4.860 ಲೀಟರ್ ಮದ್ಯವಿದ್ದು ಇದರ ಅಂದಾಜು ಮೌಲ್ಯ ರೂ.2700 ಎಂದು ಅಂದಾಜಿಸಲಾಗಿದೆ.
ಆರೋಪಿಯು ಯಾವುದೇ ಪರವಾನಿಗೆ ಅಥವಾ ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಮದ್ಯ ತುಂಬಿದ ಸ್ಯಾಚೆಟ್ಗಳನ್ನು ಆತನ ವಶದಲ್ಲಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದುದರಿಂದ ಪ್ರಕರಣ ದಾಖಲಿಸಿಕೊಂಡಿದ್ದಾರೆ.