ಉಜಿರೆ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಇವರ ಸಹಯೋಗದೊಂದಿಗೆ ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆ, ತಾಲೂಕು ಕಾನೂನು ಸೇವಾ ಸಮಿತಿ, ಬೆಳ್ತಂಗಡಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳ್ತಂಗಡಿ ಇವರ ಸಹಕಾರದೊಂದಿಗೆ ಜೂ. 17ರಂದು ವಿಶ್ವ ಪರಿಸರ ದಿನಾಚರಣೆಯನ್ನು ಉಜಿರೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮೊದಲು ಸಿದ್ದವನ ವೃತ್ತದಿಂದ ಉಜಿರೆ ಪೇಟೆವರೆಗೆ ಪರಿಸರ ಜಾಥಾ ನಡೆಯಿತು. ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಜಾಥಾಕ್ಕೆ ಚಾಲನೆ ನೀಡಿದರು. ನಂತರ ಇಂದ್ರಪ್ರಸ್ಥ ಸಭಾ೦ಗಣದ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಾನಂದ ಕಳವೆ, ಪರಿಸರ ಬರಹಗಾರರು ಶಿವಾನಂದ ಕಳವೆ ಸಿರಸಿ ನೆರವೇರಿಸಿದರು.
ಅಧ್ಯಕ್ಷತೆಯನ್ನು ಉಜಿರೆ ಎಸ್.ಡಿ.ಎಮ್. ತಾಂತ್ರಿಕ ಕಾಲೇಜು ಪ್ರಾಂಶುಪಾಲ ಅಶೋಕ ಕುಮಾರ್ ವಹಿಸಿದ್ದರು. ಗೌರವ ಅತಿಥಿಗಳಾಗಿ ಬೆಳ್ತಂಗಡಿ ಶಿಕ್ಷಣಾಧಿಕಾರಿ ವೆಂಕಟೇಶ್ ತುಳಪುಳೆ, ಎಸ್.ಡಿ.ಎಮ್. ಪಿ. ಯು. ಕಾಲೇಜು ಪ್ರಾಂಶುಪಾಲ ಪ್ರಮೋದ್ ಕುಮಾರ್ ಭಾಗವಹಿಸಿದ್ದರು. ಪರಿಸರ ಭಾಷಣವನ್ನು ಡಾ.ಹೆಚ್. ಲಕ್ಷ್ಮೀಕಾಂತ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರುಯ ಪರಿಸರ ಅಧಿಕಾರಿ ಡಾ. ಹೆಚ್. ಲಕ್ಷ್ಮೀಕಾಂತ ಮಾಡಿದರು.
ಉಜಿರೆ ಎಸ್. ಡಿ. ಎಂ ಸೆಕೆಂಡರಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಗೈದರು. ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಸಾಂಸ್ಕೃಕ ಕಾರ್ಯಕ್ರಮ ಜರಗಿತು. ಶಿಕ್ಷಣ ಸಂಸ್ಥೆಗಳ ಅಧ್ಯಾಪಕ ವೃಂದ, ವಿದ್ಯಾರ್ಥಿ ವಿದ್ಯಾರ್ಥಿನಿಯರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಜರಿದ್ದರು. ಕಾಲೇಜು ಪ್ರಾಂಶುಪಾಲ ಡಾ. ವಿಶ್ವನಾಥ ಸ್ವಾಗತಿಸಿದರು. ಉಪನ್ಯಾಸಕ ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.