Site icon Suddi Belthangady

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಮೇಲಂತಬೆಟ್ಟು ಗ್ರಾ.ಪಂ.ನಿಂದ ಅಪಾಯಕಾರಿ ಫಲಕ ಅಳವಡಿಕೆ

ಮೇಲಂತಬೆಟ್ಟು: ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ಇತ್ತಿಲ ಪೇಲ ಸಂಪರ್ಕ ರಸ್ತೆಯ ಕೂಡುಜಾಲು ಎಂಬಲ್ಲಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಅಪಾಯದಿಂದ ಪಾರಾದ ಬಗ್ಗೆ ಮಾಧ್ಯಮದಲ್ಲಿ ಪ್ರಸಾರವಾದ ಸ್ಥಳಕ್ಕೆ ಜೂ.16ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಸ್ಥಳ ಭೇಟಿ ನಡೆಸಿ ಸ್ಥಳದಲ್ಲಿ ಅಪಾಯಕಾರಿ ಫಲಕವನ್ನು ಅಳವಡಿಸಲಾಯಿತು .

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯ ಪ್ರಭಾಕರ್ ಆಚಾರ್ಯ, ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಬೆಳ್ತಂಗಡಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version