ಬಳಂಜ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಅಶೋಕ್ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪರಿಸರ ಮಾಲಿನ್ಯದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಮನುಷ್ಯರು ಬದುಕಬೇಕಾದರೆ ಪರಿಸರ ನಮಗೆ ತೀರಾ ಅವಶ್ಯವಾಗಿರಬೇಕು ಗಿಡವನ್ನು ನೆಟ್ಟು, ಪಾಲನೆ ಪೋಷಣೆ ಮಾಡಿ ರಕ್ಷಿಸಬೇಕು ಎಂದು ಮಾಹಿತಿ ನೀಡಿದರು. ಯೋಜನೆಯಿಂದ ನಡೆಯುವ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಪ್ರಮೋದ್ ಕುಮಾರ್ ಜೈನ್ ಮಾತನಾಡಿ ಕಾಡಿನಲ್ಲಿ ಹಣ್ಣಿನ ಗಿಡವನ್ನು ನಾಟಿ ಮಾಡುವುದರಿಂದ ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುತ್ತದೆ ಹಾಗೂ ಕಾಡು ಪ್ರಾಣಿಗಳ ಹಾವಳಿ ಕಡಿಮೆಯಾಗುತ್ತದೆ. ಆದರಿಂದ ಎಲ್ಲರೂ ಗಿಡಗಳನ್ನು ನೆಟ್ಟು ಅದರ ರಕ್ಷಣೆ ಮಾಡಬೇಕು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ದೇಜಪ್ಪ ಪೂಜಾರಿ, ಬಳoಜ ಗ್ರಾಮ ಪಂಚಾಯತ್ ಸದಸ್ಯೆ & ವಿಪತ್ತು ಘಟಕದ ಬೇಬಿ ನಾರಾಯಣ, ಸ್ವಚ್ಛತಾ ಸೇನಾನಿ ಅಬ್ಬುಬಕರ್, ತಾಲೂಕು ನೋಡಲ್ ಅಧಿಕಾರಿ ಸುರೇಶ್, ವಲಯದ ಮೇಲ್ವಿಚಾರಕಿ ಪದ್ಮಾವತಿ, ಸೇವಾಪ್ರತಿನಿಧಿ ಪ್ರಮೀಳಾ & ಪ್ರಗತಿ ಬಂಧು, ಸ್ವಸಹಾಯ & ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.