ಮಾಣೂರು ಸಪರಿವಾರ ಶ್ರೀ ಶಾಸ್ತಾವು ದೇವಸ್ಥಾನದ ಅಭಿವೃದ್ಧಿಗಾಗಿ ಧರ್ಮಸ್ಥಳದಿಂದ 1.50 ಲಕ್ಷ ದೇಣಿಗೆ

0

ಮಾಣೂರು: ಸಪರಿವಾರ ಶ್ರೀ ಶಾಸ್ತಾವು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ ಮುಂದಾಳತ್ವದಲ್ಲಿ ಜೀರ್ಣೋದ್ಧಾರ ಕೆಲಸಗಳು ಬಿರುಸಿನಿಂದ ಸಾಗಿದ್ದು, ಅನೇಕ ಭಕ್ತರು ದೇವಳದ ಅಭಿವೃದ್ಧಿ ಕೆಲಸಕ್ಕೆ ದೇಣಿಗೆ ನೀಡುತ್ತಿದ್ದಾರೆ.

ಜೀರ್ಣೋದಾರ ಸಮಿತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂಪಾಯಿ ಒಂದುವರೆ ಲಕ್ಷವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆಯ ಅಶೋಕ್ ಬಿ
ಹಾಗೂ ಮಡಂತ್ಯಾರ್ ವಲಯ ಮೇಲ್ವಿಚಾರಕರಾದ ಕೇಶವ,
ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರಾದ ಗೋಪಾಲ ಪೂಜಾರಿ ಕೋಲಾಜೆ, ಮಚ್ಚಿನ ಕಾಯಕ್ಷೇತ್ರದ ಸೇವಾ ಪ್ರತಿನಿಧಿ ಪರಮೇಶ್ವರವರು ಚೆಕ್ ಮುಖಾಂತರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹೊನ್ನಪ್ಪ ಕುಲಾಲ್ ಮಾಣೂರು, ಪವಿತ್ರ ಪಾಣಿ ಕೃಷ್ಣ ಭಟ್ ಮಾಣೂರು, ಕ್ಷೇತ್ರದ ಮಾಜಿ ಅಧ್ಯಕ್ಷರಾದ ಶಿವಪ್ಪ ಪೂಜಾರಿ ಮಾಣೂರು ಇವರಿಗೆ ಹಸ್ತಾಂತರ ಮಾಡಿದರು.

ಈ ಸಂಧರ್ಭದಲ್ಲಿ ಕ್ಷೇತ್ರದ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here