Site icon Suddi Belthangady

ಯೋಗರತ್ನ ಪ್ರಶಸ್ತಿಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಧರ್ಮಸ್ಥಳದಿಂದ ಯೋಗ ರತ್ನ ಪ್ರಶಸ್ತಿಗೆ ಚಿನ್ಮಯಿ ಎ. ಬೆಂಗಳೂರು ಅವರನ್ನು ಆಯ್ಕೆ ಮಾಡಲಾಗಿದೆ.

ಅಂತರಾಷ್ಟ್ರೀಯ ಯೋಗಾಸನ ವಿಜೇತೆಯಾಗಿದ್ದು ದೇಶ ವಿದೇಶಗಳಲ್ಲಿ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ. ಜೂ.21ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ, “ಪಯಣ” ಕಾರ್ ಮ್ಯೂಸಿಯಮ್ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೆ, ಬ್ರಹ್ಮಪುರ, ಶ್ರೀರಂಗಪಟ್ಟಣದಲ್ಲಿ ಶಾಂತಿವನ ಟ್ರಸ್ಟ್ ಅಧ್ಯಕ್ಷ ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯಲಿದ್ದು, ಗಣ್ಯರ ಉಪಸ್ಥಿತಿಯಲ್ಲಿ ಗೌರವ ಪುರಸ್ಕಾರ ನಡೆಯಲಿದೆ.

ಪುರಸ್ಕಾರದ ಪ್ರಮಾಣ ಪತ್ರದ ಜೊತೆಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಪ್ರತಿ ವರ್ಷ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸುವ ಕಾರ್ಯವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ನಡೆಸುತ್ತಾ ಬಂದಿದೆ. ಎಂದು ಶ್ರೀ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕ ಐ. ಶಶಿಕಾಂತ್ ಜೈನ್ ಅವರು ಪಕ್ರಟಣೆಯಲ್ಲಿ ತಿಳಿಸಿರುತ್ತಾರೆ.

Exit mobile version