Site icon Suddi Belthangady

ಧರ್ಮಸ್ಥಳ: ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಯೋಗ ತರಬೇತಿ ಶಿಬಿರ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಐದು ದಿನಗಳ ಯೋಗ ತರಬೇತಿ ಶಿಬಿರ ಜೂ. 17ರಂದು ಉದ್ಘಾಟನೆಗೊಂಡಿತು. ಉಜಿರೆಯ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದ ಪ್ರಾಧ್ಯಾಪಕಿ ವರ್ಷ ದೀಪ ಪ್ರಜ್ವಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಯೋಗದ ಅಗತ್ಯಗಳ ಬಗ್ಗೆ ತಿಳಿಸಿ, “ಯೋಗ ನಮ್ಮ ಜೀವನ ಶೈಲಿಯ ಪ್ರಮುಖ ಭಾಗವಾಗಿದೆ. ಮಾನಸಿಕ ಏಕಾಗ್ರತೆಯನ್ನು ಹೊಂದಲು ಸಹಾಯವಾಗುವ ಒಂದು ವೈಜ್ಞಾನಿಕ ಕಲೆ ಯೋಗ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ಜಯಶ್ರೀ ಜೈನ್‌ ಮಾತನಾಡಿ, ಯೋಗವು ಹದಿಹರೆಯದವರಲ್ಲಿ ಶಾಂತತೆ, ಏಕಾಗ್ರತೆ ಮತ್ತು ಭಾವನಾತ್ಮಕ ಸಮತೋಲನದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದರು. ಯೋಗ ತರಬೇತುದಾರರಾದ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ವಿದ್ಯಾಶ್ರೀ ಮತ್ತು ಸಂಗೀತ, ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಜಗದೀಶ್ ಸ್ವಾಗತಿಸಿದರು. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವಿಕಾಸ್ ಆರಿಗ ವಂದಿಸಿದರು.

Exit mobile version