Site icon Suddi Belthangady

ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಹೊಸದಾಗಿ ತರಬೇತಿಗೊಂಡು ಆಗಮಿಸಿದ ಸ್ಕೌಟ್ ಗೈಡ್ ಶಿಕ್ಷಕರಿಗೆ ಚೈತನ್ಯ ತುಂಬುವ ಚೇತರಿಕಾ ಶಿಬಿರ ನಡೆಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೊಲೀಸ್ ಇನ್ಸ್ ಪೆಕ್ಟರ್ ಮುರಳಿಧರ್ ಆಗಮಿಸಿ ಶಿಕ್ಷಕರಿಗೆ ಸ್ಕಾರ್ಫ್ ತೊಡಿಸಿ, ಪ್ರತಿಜ್ಞಾವಿಧಿಯನ್ನು ವಾಚಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಇನ್ಸ್ ಪೆಕ್ಟರ್ ಮುರುಳಿಧರ್ ಮಾತನಾಡಿ ಸ್ಕೌಟ್ ಗೈಡ್ ನ ಮಹತ್ವ ಸಮಾಜಕ್ಕೆ ಒಂದು ಮಾದರಿ ಹಾಗೆಯೇ ಮಕ್ಕಳು ಶಿಸ್ತು, ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬಹುದು ಎಂಬುದನ್ನು ತಿಳಿಸಿದರು.

ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್. ಉಪಸ್ಥಿತರಿದ್ದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಕರಿಗೆ ಅಭಿನಂದನೆಯನ್ನು ತಿಳಿಸಿದರು. ಸ್ಕೌಟ್ ಮಾಸ್ಟರ್ ಗಳಾದ ಮಂಜುನಾಥ್, ಜಯರಾಮ್, ರಮ್ಯ, ಗೀತಾ ಪಿ., ಕ್ಲಬ್ ಮಾಸ್ಟರ್ ಗಳಾದ ನೀತಾ ಕೆ.ಎಸ್., ಜಯಲಕ್ಷ್ಮಿ, ಪ್ಲಾಕ್ ಲೀಡರ್ ಪ್ರಮೀಳಾ ಉಪಸ್ಥಿತರಿದ್ದರು.

ಕಬ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಿರೂಪಣೆಯನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಪ್ರಮೀಳಾ ಪೂಜಾರಿ ನೆರವೇರಿಸಿಕೊಟ್ಟರು.

Exit mobile version