ಕುದುರೆಮುಖ: ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದಿಂದ ಟ್ರೆಕ್ಕಿಂಗ್ ಗೈಡ್ ತರಬೇತಿ ಕಾರ್ಯಕ್ರಮವು ಕುದುರೆಮುಖ ಪದ್ಮಾವತಿ ದೇವಸ್ಥಾನದ ಹಾಲ್ ನಲ್ಲಿ ಜೂ.16 ಮತ್ತು 17ರಂದು ನಡೆಯಿತು.
ಗೈಡ್ ಗಳ ಸಂವಹನ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವುದು ತರಬೇತಿಯು ಮುಖ್ಯ ಉದ್ದೇಶವಾಗಿತ್ತು. ತರಬೇತಿಯಲ್ಲಿ ಕುದುರೆಮುಖದ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ವಿವರಿಸುವ ಕೌಶಲ್ಯ ಅಭಿವೃದ್ಧಿ ಪಡಿಸಲಾಯಿತು. ತರಬೇತಿ ಕಾರ್ಯಾಗಾರಕ್ಕೆ ಹಾಜರಾದ ಗೈಡ್ ಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ತರಬೇತಿ ಕಾರ್ಯಾಗಾರದಲ್ಲಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಸಿವರಾಂಬಾಬು ಐ.ಎಫ್.ಎಸ್., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್., ಬಂಡೀಪುರದ ಸಂಪನ್ಮೂಲ ವ್ಯಕ್ತಿ ರೋನಿತ್ ನಂಜಪ್ಪ, ಬೆಳ್ತಂಗಡಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಶರ್ಮಿಷ್ಟಾ, ಕುದುರೆಮುಖ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಚೇತನ್ ಕುಮಾರ್ ಮತ್ತು ಕಾರ್ಕಳ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಶಶಿಧರ್ ಪಾಟೀಲ್ ಉಪಸ್ಥಿತರಿದ್ದರು.