ನೇಲ್ಯಡ್ಕ: ರೆಖ್ಯದ ನಾಗರಿಕ ಸೇವಾ ಟ್ರಸ್ಟ್ ಪ್ರವರ್ತಿತ ಶಾಂತಿ ಸ್ವಸಹಾಯ ಸಂಘದ ವತಿಯಿಂದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ಗಳನ್ನು ಶಾಂತಿ ಸ್ವಸಹಾಯ ಸಂಘದ ವತಿಯಿಂದ ಜೂ.17ರಂದು ವಿತರಿಸಲಾಯಿತು.
ಜೊತೆಗೆ ಹೊಸದಾಗಿ ದಾಖಲಾದ ಎಲ್ಲಾ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಸ್ವಸಹಾಯ ಸಂಘದ ಸದಸ್ಯರು ಪ್ರಾಯೋಜಿಸಿದರು.

ಸ್ವಸಹಾಯ ಸಂಘದ ಅಧ್ಯಕ್ಷ ಉದಯಕುಮಾರ್, ಕಾರ್ಯದರ್ಶಿ ರಾಜು ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಶಾಲಾ ಶುಲ್ಕವನ್ನು ನೀಡಿ ಶುಭ ಹಾರೈಸಿದರು.
ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಶಾಂತಿ ಸ್ವಸಹಾಯ ಸಂಘದ ಸದಸ್ಯರ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿದರು.
ಸಂಸ್ಥೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅರವಿಂದ ಗೋಖಲೆ ಸ್ವಾಗತಿಸಿದರು. ವಿಜಯಕುಮಾರ್ ನಿರೂಪಿಸಿದರು. ಉದಯಕುಮಾರ್ ವಂದಿಸಿದರು.