
ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಜೂ.19ರಂದು ಕುಕ್ಕೆ ಸುಬ್ರಮಣ್ಯ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮತ್ತು ಅವರ ಪತ್ನಿ ಚೇತನ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಸೌತೆಡ್ಕ ಶ್ರೀ ಮಹಾಗಣಪತಿ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಸುಬ್ರಮಣ್ಯ ಶಬರಾಯ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದು ಗೌರವಿಸಿದರು.