ನೇಲ್ಯಡ್ಕ: ನಾಡಿನ ಅತ್ಯಂತ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಪುತ್ತೂರಿನ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ನಿಂದ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕ ಸರ್ಕಾರಿ ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗನ್ನು ಜೂ.18ರಂದು ವಿತರಿಸಲಾಯಿತು.

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನ ಬಲರಾಮ್ ಆಚಾರ್ಯ ಅವರು ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗನ್ನು ಕೊಡುಗೆಯಾಗಿ ನೀಡಿ ವಿದ್ಯಾರ್ಥಿಗಳಿಗೆ ಹಾಗೂ ಪ್ರೌಢಶಾಲೆಗೆ ಶುಭ ಹಾರೈಸಿದರು.
ಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಕೃಷ್ಣ ಗ್ರಾಮೀಣ ಕನ್ನಡ ಮಾಧ್ಯಮದ ಸರ್ಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳೆಲ್ಲರಿಗೂ ಸ್ಕೂಲ್ ಬ್ಯಾಗನ್ನು ನೀಡಿದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯ ಕೊಡುಗೆಗೆ ಧನ್ಯವಾದ ಸಮರ್ಪಿಸಿದರು.