Site icon Suddi Belthangady

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್ ಅವರಿಗೆ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ: ಬೆಂಗಳೂರಿನಲ್ಲಿ ಇಂದು ಸಂಜೆ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಸರಿಯಾದ ಮಾರ್ಗದರ್ಶನ ನೀಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಕನಸನ್ನು ನನಸು ಮಾಡುವಲ್ಲಿ ಯಶಸ್ವಿಯಾಗಿರುವ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷ ಸುಮಂತ್ ಕುಮಾರ್ ಜೈನ್‌ ದೇಶ ಕಂಡ ಅಪ್ರತಿಮ ಸಾಧಕ.

ಸಾದನೆಯಲ್ಲಿ ದೇಶ ಕಂಡ ಅಪ್ರತಿಮ ಸಾದಕ ಡಾ.ವಿಜಯ ಸಂಕೇಶ್ವರ್ ಅವರು. ದೇಶದ ಉದ್ದಗಲದಲ್ಲಿ ಸಾರಿಗೆ ವ್ಯವಸ್ಥೆ, ಪತ್ರಿಕೋದ್ಯಮದಲ್ಲಿ ಗಣನೀಯ ಸಾಧನೆ,ಆಯುರ್ವೇದದಲ್ಲಿ ಒಲವು, ದೇಶಿಯ ಪದ್ದತಿಗೆ ಅಸಕ್ತಿ, ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡವರು.

ಸಣ್ಣವಯಸ್ಸಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್ ರವರನ್ನು ಈ ವರ್ಷದ “ವಿಜಯರತ್ನ ಪ್ರಶಸ್ತಿ ಗೆ ಆಯ್ಕೆ ಮಾಡಿರುವುದು ಅರ್ಹರಿಗೆ ಸಂದ ಗೌರವ. ಜೂ.20ರಂದು ಬೆಂಗಳೂರಿನಲ್ಲಿ ಸಂಜೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಮಂತ್ ಕುಮಾ‌ರ್ ಜೈನ್ ಅವರಿಗೆ ಪ್ರಶಸ್ತಿ ಪ್ರದಾನವಾಗಲಿದೆ.

Exit mobile version