ಕಲ್ಮಂಜ: ಸರಕಾರಿ ಪ್ರೌಢ ಶಾಲೆಯಲ್ಲಿ ಜೂ. 21ರಂದು ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಇತ್ತೀಚೆಗೆ ಯೋಗ ತರಬೇತಿಗಳನ್ನು ಆರಂಭಿಸಲಾಯಿತು. ಕಲ್ಮಂಜ ಸಮುದಾಯ ಆರೋಗ್ಯ ಅಧಿಕಾರಿ ರಂಜಿತಾ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ದೇಹ ಮತ್ತು ಮನಸ್ಸನ್ನು ಒಗ್ಗೂಡಿಸಿ ಆರೋಗ್ಯ ಕಾಪಾಡುವಲ್ಲಿ ಮನಸ್ಸಿನ ಏಕಾಗ್ರತೆ ಸಾಧಿಸುವಲ್ಲಿ ಯೋಗ ಅತಿ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಯಾವುದೇ ಔಷಧವಿಲ್ಲದೆ ರೋಗಗಳನ್ನು ನಿವಾರಿಸಲು ಯೋಗದಲ್ಲಿ ಸಾಧ್ಯವಿದೆ ಯೋಗವನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವಂತರಾಗಿರಿ ಎಂದು ವಿದ್ಯಾರ್ಥಿಗಳಿಗೆ ಕರೇ ನೀಡಿದರು.
ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ಮಾತನಾಡುತ್ತಾ ನಮ್ಮ ಜೀವನದ ಪ್ರತಿ ಭಂಗಿಯೂ ಯೋಗವನ್ನು ಪ್ರತಿನಿಧಿಸುತ್ತದೆ. ಯೋಗದ ಮೂಲಕ ನಾವು ನಮ್ಮ ಜೀವನವನ್ನು ಯೋಗಿಯ ಜೀವನದಂತೆ ನಡೆಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ ದೈಹಿಕ ಶಿಕ್ಷಣ ಶಿಕ್ಷಕಿ ವಸಂತಿ ಎಂ. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಹೇಮಲತಾ ಬಿ., ಪ್ರೇಮಲತಾ ಪಿ., ಮಾಲಿನಿ ಹೆಗಡೆ, ಸಾವಿತ್ರಿ ಸಿ.ಡಿ., ಸವಿತಾ, ಪ್ರೇಮ ಮತ್ತು ಚೈತ್ರ ಸಹಕಾರ ನೀಡಿದರು.