Site icon Suddi Belthangady

ಎಲ್.ಸಿ.ಆರ್ ಇಂಡಿಯನ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ ನಿಂದ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ವಿದ್ಯಾರ್ಥಿ ವೇತನದ ಬಗ್ಗೆ ಜೂ. 20ರಂದು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಿವೃತ್ತ ಶಿಕ್ಷಕ ನಾರಾಯಣ ನಾಯ್ಕ ಸಿದ್ಧಕಟ್ಟೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ನೀಡಿದರು.

ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ.ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್., ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ವಿಂದ್ಯಾಶ್ರೀ ಹಾಗೂ ಉಪನ್ಯಾಸಕ ವೃಂದದವರ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ಪೂರ್ಣಗೊಂಡಿತು.

Exit mobile version