ಮುಂಡಾಜೆ: ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ರೋಟರಿ ಬೆಂಗಳೂರು ಇಂದಿರಾನಗರ, ಕ್ಯಾನ್ ಫಿನ್ ಹೋಮ್ಸ್ ಲಿ. ಬೆಂಗಳೂರಿನ ದಾನಿಗಳ ನೆರವಿನಿಂದ 18000 ಚದರ ಅಡಿಯಲ್ಲಿ ತರಗತಿ ಕೊಠಡಿ, ಕಚೇರಿ ಕೊಠಡಿ, ಸಿಬ್ಬಂದಿ ಕೊಠಡಿ, ಕಂಪ್ಯೂಟರ್ ಲ್ಯಾಬ್, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ಹೀಗೆ ಸುಮಾರು ರೂ 2.25 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಂಡಾಜೆ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲಾ ಕಟ್ಟಡ ಸಿಂಧೂರದ ಲೋಕಾರ್ಪಣಾ ಕಾರ್ಯಕ್ರಮವು ಜೂ. 20ರಂದು ಮುಂಡಾಜೆಯ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ನೆರವೇರಿತು.
ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ವಹಿಸಿ ಮಾತನಾಡಿ ರೋಟರಿ ಸಂಸ್ಥೆಯವರು ಸುಂದರವಾದ ಕೆಲಸವನ್ನು ಮಾಡಿದ್ದಾರೆ. ಮಕ್ಕಳು ಮುಂದಿನ ದಿನಗಳಲ್ಲಿ ರಾಷ್ಟ್ರದ ಕಾರ್ಯ ಮಾಡಬೇಕು ಎಂಬ ದೃಷ್ಟಿಯಿಂದ ಮತ್ತು ಸಿಂಧೂರ ಎಂದರೆ ದೇಶದ ಗುರುತು ಎಂದರು.

ಸಿಂಧೂರ ಕಟ್ಟಡದ ಉದ್ಘಾಟನೆಯನ್ನು ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ವಿಕ್ರಂ ದತ್ತ ನೆರವೇರಿಸಿ ಶುಭ ಕೋರಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಶಾಲೆಯ ಶಿಲಾಫಲಕವನ್ನು ಅನಾವರಣಗೊಳಿಸಿದರು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಬಂಗೇರ, ಕ್ಯಾನ್ಫಿನ್ ಹೋಮ್ಸ್ ಬೆಂಗಳೂರಿನ ಡಿಜಿಎಂ ಪ್ರಶಾಂತ್ ಜೋಶಿ, ಲಕ್ಷ್ಮೀ ಇಂಡಸ್ಟ್ರೀಸ್ ಉಜಿರೆ ಮಾಲಕ ಕೆ.ಮೋಹನ್ ಕುಮಾರ್, ಶತಾಬಿ ವಿದ್ಯಾಲಯ ಸಮಿತಿ ಮುಂಡಾಜೆ ಅಧ್ಯಕ್ಷ ಶ್ರೀಧರ ಜಿ. ಭಿಡೆ, ನಿಕಟಪೂರ್ವ ಜಿಲ್ಲಾ ಗವರ್ನರ್ ರೊ. ಹೆಚ್.ಆರ್. ಕೇಶವ, ಬೆಂಗಳೂರು ಯವ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಬೆಳ್ತಂಗಡಿ ರೋಟರಿ ಕ್ಲಬ್ ನಿಕಟ ಪೂರ್ವಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಬೆಂಗಳೂರು ರೋಟರಿ ಕ್ಲಬ್ ಅಧ್ಯಕ್ಷೆ ರೊ. ಸುಪ್ರಿಯ ಕಂದಾರಿ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಪೂರನ್ ವರ್ಮ, ಡಾ.ಕೃಷ್ಣ ಭಟ್ ಕೊಂಕೋಡಿ ಉಪಸ್ಥಿತರಿದ್ದರು.


ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ವಿನಯಚಂದ್ರ, ರೋಟರಿ ಕ್ಲಬ್ ನಿಕಟಪೂರ್ವ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು, ಮುಂಡಾಜೆ ಅನುದಾನಿತ ಪ್ರೌಢಶಾಲಾ ಸಂಚಾಲಕ ನಾರಾಯಣ ಫಡ್ಕ, ನಾರಾಯಣ ಗೌಡ ಪಂಚಶ್ರೀ, ಮುಂಡಾಜೆ ಅನುದಾನಿತ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಜಯಂತಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲೆಗೆ ವಿವಿಧ ರೀತಿಯಲ್ಲಿ ಸಹಕರಿಸಿದ ಮಹದಾನಿಗಳನ್ನು ಸನ್ಮಾನಿಸಲಾಯಿತು. ಮುಂಡಾಜೆ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲಾ ಮಕ್ಕಳಿಂದ ಸರಸ್ವತಿ ವಂದನೆ ಮಾಡಿದರು. ರೊ.ಅನಂತ್ ಭಟ್ ಮಚ್ಚಿಮಲೆ ಪ್ರಾಸ್ತವಿಕ ಮಾತುಗಳಿಂದ ಗಣ್ಯರನ್ನು ಸ್ವಾಗತಿಸಿ, ಬೆಳ್ತಂಗಡಿ ಹಿರಿಯ ನ್ಯಾಯವಾದಿ ಧನಂಜಯ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಮುಂಡಾಜೆ ವಿವೇಕಾನಂದ ವಿದ್ಯಾ ಸಂಸ್ಥೆಯ ಅಧ್ಯಕ್ಷ ವಿನಯ ಚಂದ್ರ ವಂದಿಸಿದರು.