ನಿಡ್ಲೆ ಪ್ರೌಢ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಆರಂಭ

0

ನಿಡ್ಲೆ: ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ನಡೆಯುವ 2025-26ನೇ ಸಾಲಿನ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಕಾರ್ಯಕ್ರಮವು ನಿಡ್ಲೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮವನ್ನು ಫೌಂಡೇಶನ್ ನ ಕೇಂದ್ರ ಸಮಿತಿಯ ಟ್ರಸ್ಟಿಗಳೂ, ಸಂಘಟಕರು ಆಗಿರುವ ಭುಜಬಲಿ ಬಿ. ಧರ್ಮಸ್ಥಳ ಉದ್ಘಾಟಿಸಿ, ಉತ್ತಮ ಕಲಾವಿದರಾದ ಈಶ್ವರ ಪ್ರಸಾದ್ ಗುರುಗಳಾಗಿ ಸಿಗುತ್ತಿರುವುದು ನಿಮ್ಮ ಭಾಗ್ಯ. ವಿದ್ಯಾಭ್ಯಾಸದ ಜೊತೆಗೆ ಯಕ್ಷಗಾನವನ್ನು ಕಲಿಯಿರಿ ಇದು ನಿಮ್ಮ ಭವಿಷ್ಯಕ್ಕೆ ಪೂರಕ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಜೊತೆಗೆ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಾರ್ಯ ಚಟುವಟಿಕೆಗಳನ್ನು ತಿಳಿಸಿದರು.

ಪಟ್ಲ ಸತೀಶ್ ಶೆಟ್ಟಿಯವರ ಕಾರ್ಯವೈಖರಿಯನ್ನು ಪ್ರಶಂಶಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಟ್ರಸ್ಟ್ ನ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಮಾತನಾಡಿ ಕಳೆದ ಮೂರು ವರ್ಷಗಳಿಂದ ವಿವಿಧ ಶಾಲೆಗಳಲ್ಲಿ ನಡೆಯುತ್ತಿರುವ ಯಕ್ಷನಾಟ್ಯ ಅಭಿಯಾನ ಕಾರ್ಯಕ್ರಮದ ಬಗ್ಗೆ ತಿಳಿಸುತ್ತಾ ಪ್ರಸ್ತುತ ಸಾಲಿನಲ್ಲಿ ನಡೆಯುವ ನಾಟ್ಯ ಅಭಿಯಾನ ಕಾರ್ಯಕ್ರಮದ ಬಗ್ಗೆ ಮತ್ತು ಪಟ್ಲ ಫೌಂಡೇಶನ್ ಟ್ರಸ್ಟ್ ಕಾರ್ಯ ಚಟುವಟಿಕೆಗಳನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಟ್ರಸ್ಟಿಗಳಲ್ಲಿ ಓರ್ವರಾದ ಊರಿನ ಹಿರಿಯರಾದ ಮಧುಕರ್ ರಾವ್ ಮಚ್ಚಳೆ ಅವರು ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ಸೂಚಿಸುತ್ತ ಶುಭ ಕೋರಿದರು. ಯಕ್ಷ ನಾಟ್ಯ ಗುರು ಈಶ್ವರ ಪ್ರಸಾದ್ ಪಿ.ವಿ ಯಕ್ಷಗಾನ ಕಲಿಕೆಯ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕಲಿತ ವಿಷಯಗಳನ್ನು ಅಭ್ಯಾಸ ಮಾಡುತ್ತಾ ಮುಂದುವರೆದರೆ ಭವಿಷ್ಯವಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಶಾಂತ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಶೋಲಿ ನಿರೂಪಿಸಿ, ಶಿಕ್ಷಕ ಶರತ್ ಕುಮಾರ್ ತುಳುಪುಳೆ ವಂದಿಸಿದರು.

LEAVE A REPLY

Please enter your comment!
Please enter your name here