ಶೈಕ್ಷಣಿಕ ಕ್ಷೇತ್ರದ ಸಾಧಕ, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಪ್ರಧಾನ

0

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಅದ್ಯಕ್ಷ ಸುಮಂತ್ ಕುಮಾ‌ರ್ ಜೈನ್ ಅವರು ಗ್ರಾಮೀಣ ಭಾಗದ ಮಕ್ಕಳು ವೈದ್ಯರಾಗಬೇಕು, ಇಂಜಿನಿಯರ್ ಆಗಬೇಕು ಎನ್ನುವ ಕನಸು ಕಟ್ಟಿದ ಇವರಿಗೆ. ಪ್ರತೀ ವರ್ಷ ವಿಜಯವಾಣಿ ದಿನ ಪತ್ರಿಕೆ ಕೊಡಮಾಡುವ ಪ್ರತಿಷ್ಠಿತ ವಿಜಯ ರತ್ನ ಪ್ರಶಸ್ತಿ ಪುರಸ್ಕಾರ ಸಮಾರಂಭವು ಜೂ. 20ರಂದು ನಡೆಯಿತು.

ದೇಶದ ಉತ್ತಮ ವೈದ್ಯರಾಗಬೇಕು,ಉತ್ತಮ ಇಂಜಿನಿಯರಿಂಗ್‌ ಆಗಬೇಕು ಎನ್ನುವ ಕನಸು ಕಂಡವರು ಸಾಧನೆಯಲ್ಲಿ ದೇಶ ಕಂಡ ಅಪ್ರತಿಮ ಸಾದಕ ಡಾ.ವಿಜಯ ಸಂಕೇಶ್ವರ್ ರವರು. ದೇಶದ ಉದ್ದಗಲದಲ್ಲಿ ಸಾರಿಗೆ ವ್ಯವಸ್ಥೆ, ಪತ್ರಿಕೋದ್ಯಮದಲ್ಲಿ ಗಣನೀಯ ಸಾಧನೆ, ಆಯುರ್ವೇದದಲ್ಲಿ ಒಲವು, ದೇಶಿಯ ಪದ್ದತಿಗೆ ಅಸಕ್ತಿ, ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡವರು. ಈ ವರ್ಷದ “ವಿಜಯರತ್ನ ಪ್ರಶಸ್ತಿ” ಗೆ ಆಯ್ಕೆ ಮಾಡಿರುವುದು ಅರ್ಹರಿಗೆ ಸಂದ ಗೌರವ.

ಇಂತಹ ಕನಸು ಕಂಡವರು ಕೂಡ ಎಕ್ಷೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಕೂಡ ಒಬ್ಬರು. ಸಣ್ಣವಯಸ್ಸಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿ 25 ವಿದ್ಯಾರ್ಥಿಗಳಿಂದ ಕೋಚಿಂಗ್ ತರಗತಿ ಪ್ರಾರಂಭಿಸಿ ಪ್ರಸ್ತುತ ಸುಮಾರು 5000 ವಿದ್ಯಾರ್ಥಿಗಳು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಸಾಧನೆಗೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರನ್ನು ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಮಂತ್ ಕುಮಾ‌ರ್ ಜೈನ್ ಅವರಿಗೆ ವಿಜಯ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸುಮಂತ್ ಕುಮಾ‌ರ್ ಜೈನ್ ಅವರ ತಂದೆ ಸತೀಶ್ ಕುಮಾ‌ರ್, ತಾಯಿ ಶುಭಲತಾ ಅವರೊಂದಿಗೆ ಸ್ವೀಕರಿಸಿದರು. ಕೃಷಿ ಸಚಿವ ಎಸ್. ಚೆಲುವರಾಯ ಸ್ವಾಮಿ, ಸಂಸದ ಪಿ.ಸಿ.ಮೋಹನ್, ಎ.ಡಿ.ಜಿ.ಪಿ ಡಿ.ರೂಪಾ, ವಿ.ಆರ್.ಎಲ್ ಸಮೂಹ ಸಂಸ್ಥೆಗಳ ಎಂ.ಡಿ. ಡಾ.ಆನಂದ ಸಂಕೇಶ್ವರ ಉಪಸ್ಥಿತರಿದ್ದರು. ಎಕ್ಸೆಲ್ ಕಾಲೇಜಿನ ರಿತೇಶ್‌ ಹಾಗೂ ಪದ್ಮಪ್ರಸಾದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here