ನೆಲ್ಯಾಡಿ ಅಮೂಲ್ಯ ಮಹಾಸಂಘದಿಂದ ಪರಿಸರ ದಿನಾಚರಣೆ

0

ಬೆಳ್ತಂಗಡಿ: ನೆಲ್ಯಾಡಿ ಅಮೂಲ್ಯ ಮಹಾಸಂಘದ ಮಾಸಿಕ ಸಭೆ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜೂ.19ರಂದು ಸಂತ ಅಲ್ಫೋನ್ಸ ಸಭಾಂಗಣ ನೆಲ್ಯಾಡಿಯಲ್ಲಿ ಆಯೋಜಿಸಲಾಗಿತ್ತು. ಅಮೂಲ್ಯ ಮಹಾಸಂಘದ ಅಧ್ಯಕ್ಷೆ ತಂಗಮ್ಮ ಅಧ್ಯಕ್ಷತೆಯನ್ನು ವಹಿಸಿದ್ದರು. ಅತಿಥಿಗಳಾಗಿ ನೆಲ್ಯಾಡಿ ಚರ್ಚ್ ಸಹಾಯಕ ಧರ್ಮಗುರು ಫಾ. ಅಲೆಕ್ಸ್ ಪರಿಸರವನ್ನು ಉಳಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ಫಾ. ಬಿನೋಯಿ ಎ.ಜೆ. ನಾಯಕತ್ವದ ಬಗ್ಗೆ ಮಾಹಿತಿ ನೀಡಿದರು. ಕಿರಣ್ ತಾಲೂಕು ಒಕ್ಕೂಟದ ಅಧ್ಯಕ್ಷೆ ಡೈಸಿ ಜೋಯ್, ಸಂಯೋಜಕಿ ಸಿಸಿಲ್ಯಾ ತಾವ್ರೊ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚರ್ಚ್ ವಠಾರದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸುಜ ಎಲ್ಲರನ್ನು ಸ್ವಾಗತಿಸಿದರು. ಲಿಸ್ಸಿ ಕಾರ್ಯಕ್ರಮ ನಿರೂಪಿಸಿದರು. ನಿಶಾ ವಂದಿಸಿದರು.

LEAVE A REPLY

Please enter your comment!
Please enter your name here