ಸವಣಾಲು ಅನುದಾನಿತ ಶಾಲೆಗೆ ಉಚಿತ ಪುಸ್ತಕ ಕೊಡುಗೆ

0

ಬೆಳ್ತಂಗಡಿ: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲಿನ ಹಳೆಯ ವಿದ್ಯಾರ್ಥಿ, ಬಲಿಪ ರೆಸಾರ್ಟಿನ ಮಾಲಿಕ, ವಕೀಲರು ಮತ್ತು 2025-26ನೇ ಸಾಲಿನ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ನಿಯೋಜಿತ ಅಧ್ಯಕ್ಷ ಮುರಳಿ ಬಲಿಪ ಅವರಿಂದ ಸವಣಾಲು ಅನುದಾನಿತ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ 13ನೇ ವರ್ಷದಲ್ಲಿ ಉಚಿತ ಪುಸ್ತಕಗಳನ್ನು ವಿತರಿಸಿದರು. ಜೂ.20ರಂದು ಶಾಲಾ ಸಭಾಂಗಣದಲ್ಲಿ ಸಮಾರಂಭ ನೆರವೇರಿತು.

ಸಭೆಯ ಅಧ್ಯಕ್ಷತೆಯನ್ನು ಶಾಲಾಡಳಿತ ಸಮಿತಿಯ ಉಪಾಧ್ಯಕ್ಷ ದಾಮೋದರ ಬಂಗೇರ ವಹಿಸಿದ್ದರು. ಅತಿಥಿಗಳಾಗಿ ಶಾಲಾಡಳಿತ ಸಮಿತಿಯ ಅಧ್ಯಕ್ಷ ದಯಾನಂದ ರೈ, ಕಾರ್ಯದರ್ಶಿ ಕೂಸಪ್ಪ ಗೌಡ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಭಂಡಾರಿ, ಆಡಳಿತ ಸಮಿತಿಯ ಪದಾಧಿಕಾರಿ ವಿವೇಕ್ ಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸೇವಾ ಕರ್ತರಾದ ಮುರಳಿ ಬಲಿಪ ಅವರ ಪುತ್ರರಾದ ಮಯೂರ ಬಲಿಪ ಮತ್ತು ಮಂದಾರ ಬಲಿಪ, ತಾಯಂದಿರ ಸಮಿತಿಯ ಅಧ್ಯಕ್ಷೆ ಪ್ರೇಮಾ, ಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ ಜಿ., ಶಾಲಾ ಶಿಕ್ಷಕಿಯರಾದ ಮಮತಾ, ಸೌಮ್ಯಾ, ಶುಭ, ಸುಷ್ಮಾ, ವೈಶಾಲಿ, ಶಾಲಾ ವಿದ್ಯಾರ್ಥಿ ನಾಯಕ ಧನ್ ರಾಜ್ ಹೆಗ್ಡೆ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಮುಖ್ಯೋಪಾಧ್ಯಾಯರು ಸ್ವಾಗತಿಸಿದರು. ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು. ಸೌಮ್ಯಾ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here