ಅಂಡಿಂಜೆ: ಜಾಗೃತಿ ಮಹಿಳಾ ಮಂಡಲದಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್, ಕುಕ್ಕರ್ ಮತ್ತು ಬೇಸಿನ್ ಅನ್ನು ಜೂ.21ರಂದು ಕೊಡುಗೆಯಾಗಿ ನೀಡಲಾಯಿತು.
ಕೊಡುಗೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಜಾಗೃತಿ ಮಹಿಳಾ ಮಂಡಲದ ಅಧ್ಯಕ್ಷೆ ಸರೋಜಾ ಗುಣಪಾಲ್ ಜೈನ್ ಕೈರೋಳಿ, ಕಾರ್ಯದರ್ಶಿ ಶಾರದಾ ಟೀಚರ್ ಮತ್ತು ಆಶಾ ಕಾರ್ಯಕರ್ತೆ ಸುಜಾತ ಅವರನ್ನು ಬಾಲವಿಕಾಸ ಸಮಿತಿ, ಸ್ತ್ರೀ ಶಕ್ತಿ ಮತ್ತು ಪೋಷಕರ ವತಿಯಿಂದ ಸನ್ಮಾನಿಸಲಾಯಿತು. ಯೋಗಾಸನ ಮಾಡುವ ಮೂಲಕ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅಂಡಿಂಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ವೇತಾ ಪರಮೇಶ್ವರ್, ಕೊಕ್ರಾಡಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಗಾಯತ್ರಿದೇವಿ, ನೆಲ್ಲಿಂಗೇರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮೀನಾ, ಅಂಡಿಂಜೆ ಉ. ಪ್ರಾ. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ನಳಿನಿ, ಬಾಲವಿಕಾಸ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಅಂಡಿಂಜೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು. ಸಹಾಯಕಿ ಸುಮಲತಾ ಧನ್ಯವಾದ ಸಮರ್ಪಿಸಿದರು.