Site icon Suddi Belthangady

ವಾಣಿ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಉತ್ತಮ ಆರೋಗ್ಯ ಮತ್ತು ಮಾನಸಿಕ ದೃಢತೆಯನ್ನು ಪಡೆಯುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಅಧ್ಯಯನಶೀಲತೆ ಮತ್ತು ನೆನಪಿನ ಶಕ್ತಿಯನ್ನು ಹೆಚ್ಚಿಸಲು ಯೋಗದಿಂದ ಸಾಧ್ಯವಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಅಧ್ಯಕ್ಷತೆ ವಹಿಸಿದ್ದರು. ಎನ್. ಎಸ್. ಎಸ್ ಘಟಕ ನಾಯಕರಾದ ತೀರ್ಥೇಶ್ ಮತ್ತು ಸುಶ್ಮಿತಾ ಉಪಸ್ಥಿತರಿದ್ದರು. ಎನ್. ಎಸ್. ಎಸ್. ಕಾರ್ಯಕ್ರಮಾಧಿಕಾರಿ ದಿನೇಶ್ ಸ್ವಾಗತಿಸಿದರು. ತೃಷಾ ಕಾರ್ಯಕ್ರಮ ನಿರೂಪಿಸಿದರು. ಸಹ ಕಾರ್ಯಕ್ರಮಾಧಿಕಾರಿ ಶ್ರಾವ್ಯ ಧನ್ಯವಾದವಿತ್ತರು.

Exit mobile version