ಧರ್ಮಸ್ಥಳ: ಜೂ. 21ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ಶಾಲೆಯಲ್ಲಿ 11ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ” ಒಂದು ಭೂಮಿ, ಒಂದು ಆರೋಗ್ಯ ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಎಸ್. ಡಿ. ಎಂ. ಸಿ ಅಧ್ಯಕ್ಷ ಕೆ. ನಂದ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಎಸ್. ಡಿ. ಎಂ ಪ್ರಕೃತಿ ಚಿಕಿತ್ಸಾಲಯ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಉಜಿರೆಯ ಎರಡನೇ ವರ್ಷದ ಬಿ.ಎನ್.ವೈ.ಎಸ್ (BNYS)ವಿದ್ಯಾರ್ಥಿಗಳಾದ ಪ್ರಾಚ್ಯ ಕೀರ್ತಿ ಮತ್ತು ಸ್ಪೂರ್ತಿ ಕೆ. ಎಸ್. ಶಾಲಾ ವಿದ್ಯಾರ್ಥಿಗಳಿಗೆ ಯೋಗವನ್ನು ಹೇಳಿಕೊಡುವ ಮೂಲಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ನ ಅರಿವು ಕೇಂದ್ರದ ಮೇಲ್ವಿಚಾರಕಿ ಮಂಜುಳಾ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಪುಷ್ಪಾ ಎನ್., ಶಾಲಾ ಹಿರಿಯ ವಿದ್ಯಾರ್ಥಿ ಸುದರ್ಶನ್ ಕೆ.ವಿ., ಶಾಲಾ ಶಿಕ್ಷಕ ವೃಂದದವರು, ಶಾಲೆಯ ಮಕ್ಕಳು ಉಪಸ್ಥಿತರಿದ್ದರು.
ಶಾಲೆಯಲ್ಲಿ ಒಂದು ವಾರ ಆಸಕ್ತ ಮಕ್ಕಳಿಗೆ ಪ್ರಾಚ್ಯ, ಕೀರ್ತಿ ಮತ್ತು ಸ್ಪೂರ್ತಿ ಕೆ.ಎಸ್. ಯೋಗ ಶಿಬಿರ ನಡೆಸಿಕೊಟ್ಟಿದ್ದರು.
ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಾ ಎನ್. ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.