ಪೆರಿಂಜೆ: ಮಂಗಳೂರು ಕೆಮಿಕಲ್ಸ್ ಅಂಡ್ ಫರ್ಟಿಲೈಝರ್ಸ್ ಲಿಮಿಟೆಡ್ ಪಣಂಬೂರ್ ಮಂಗಳೂರು ಇದರ ಸಿ.ಎಸ್.ಆರ್ ಆಕ್ಟಿವಿಟಿ 2024- 25ರ ಸ್ವಚ್ಛ ವಿದ್ಯಾಲಯ ಯೋಜನೆ ಅಡಿಯಲ್ಲಿ ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಲೋಕಾರ್ಪಣಾ ಕಾರ್ಯಕ್ರಮ ಜೂ. 22ರಂದು ನೆರವೇರಿತು.
ಎಂ.ಸಿ.ಎಫ್ ನ ಮುಖ್ಯ ಉತ್ಪಾದನಾಧಿಕಾರಿ ಎಸ್. ಗಿರೀಶ್ ನೂತನ ಶೌಚಾಲಯವನ್ನು ಲೋಕಾರ್ಪಣೆಗೆದರು. ನಂತರ ನಡೆದ ಸಮಾರಂಭವನ್ನು ಶಾಸಕ ಹರೀಶ್ ಪೂಂಜ ದೀಪ ಬೆಳಗುವ ಮುಖಾಂತರ ಉದ್ಘಾಟಿಸಿ ಗ್ರಾಮೀಣ ಶಾಲೆಯ ಬಲವರ್ಧನೆಗೆ ಶ್ರಮಿಸುತ್ತಿರುವ ಎಂ.ಸಿ.ಎಫ್ ನ ಕಾರ್ಯಗಳನ್ನು ಶ್ಲಾಘಿಸಿದರು.
ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಾಂತ ಕೃಷ್ಣಪ್ಪ, ಸದಸ್ಯರುಗಳಾದ ಕರುಣಾಕರ, ಪ್ರಕಾಶ್ ದೇವಾಡಿಗ, ನಾಗರತ್ನ, ಶಾಂತ, ಕಮಲ, ಎಂ.ಸಿ.ಎಫ್ ನ ಅಧಿಕಾರಿಗಳಾದ ಚೇತನ್ ಮೆಂಡೋನ್ಸ, ಡಾ. ಯೋಗೀಶ್, ದೀಕ್ಷಿತ್ ಶೆಟ್ಟಿ, ವಿವೇಕ್ ಕೋಟ್ಯಾನ್, ವಲಯ ಜನ ಜಾಗೃತಿ ವೇದಿಕೆಯ ತಾಲೂಕು ಸದಸ್ಯ ವಿಠ್ಠಲ್ ಸಿ. ಪೂಜಾರಿ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಆರತಿ ಜೈನ್, ಶಾಲಾ ಎಸ್.ಡಿ. ಎಂ.ಸಿ ಅಧ್ಯಕ್ಷ ಶೇಖರ್ ಕುಲಾಲ್, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಎಂ.ಸಿ.ಎಫ್ ನಿಂದ ಶಾಲೆಗೆ ನೂತನ ಶೌಚಾಲಯ ಬರುವಲ್ಲಿ ಶಮಿಸಿದ ದಿ. ಹರಿಪ್ರಸಾದ್ ಅವರ ಕಾರ್ಯವನ್ನು ಸ್ಮರಿಸಲಾಯಿತು. ಶಿಕ್ಷಕ ವಿಶ್ವನಾಥ ಗೌಡ ಸ್ವಾಗತಿಸಿ, ರಾಜೇಶ್ ನೆಲ್ಯಾಡಿ ಕಾರ್ಯಕ್ರಮ ನಿರ್ವಹಿಸಿದರು. ಮುಖ್ಯ ಶಿಕ್ಷಕಿ ನೀನಾ ಕುವೆಲ್ಲೋ ಧನ್ಯವಾದಗೈದರು.