ಶಿರ್ಲಾಲು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಒಂದರಿಂದ ಎಂಟನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯ ನೋಟರಿ ವಕೀಲ ಮುರಳಿ ಬಿ. ಅವರಿಂದ ನೋಟ್ ಪುಸ್ತಕ ವಿತರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಮುರಳಿಯವರ ಪತ್ನಿ ಮನೋರಮ, ಮಕ್ಕಳಾದ ಮಯೂರ, ಮಂದಾರ ಉಪಸ್ಥಿತರಿದ್ದರು.
ಶಿರ್ಲಾಲು ಪ್ರಾ. ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್, ಶಿರ್ಲಾಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ ಬಂಗೇರ, ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ಅಶೋಕ್ ಕುಲಾಲ್, ಉಪಾಧ್ಯಕ್ಷೆ ಶಶಿಕಲಾ, ಎಸ್. ಡಿ. ಎಂ. ಸಿ ಸದಸ್ಯರು, ಪೋಷಕರು, ಮಕ್ಕಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸರೋಜಿನಿ ಸ್ವಾಗತಿಸಿದರು. ಸಹ ಶಿಕ್ಷಕಿ ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ಪ ಪೂಜಾರಿ ವಂದಿಸಿದರು.