ಶಿರ್ಲಾಲು: ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 2 ವರ್ಷಗಳಾದರೂ ಸುಸೂತ್ರವಾಗಿ ಆಡಳಿತ ನಡೆಸದೆ ಭೂಮಾಫಿಯ, ಪಟ್ಟಭದ್ರ ಹಿತಾಸಕ್ತಿಗಳಿಂದ ಜನರಿಗೆ ಸುಲಭ ರೀತಿಯ ಸೇವೆ ದೊರಕದೆ ಭಷ್ಟಚಾರದ ಕೂಪದಿಂದ ಸ್ರೀ ಸಾಮಾನ್ಯರ ಹಣ ದೋಚಲು ಅವೈಜ್ಞಾನಿಕ ನಿಯಮ ರೂಪಿಸಿ ಅಲೆದಾಟದ ಭಾಗ್ಯ ಒದಗಿಸಿರುವುದನ್ನು ಹಾಗೂ
9/11 ನಿವೇಶನಗಳ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ, ಅಕ್ರಮ ಸಕ್ರಮ ತಿರಸ್ಕರಿಸುವುದನ್ನು ಖಂಡಿಸಿ, ಬಡವರ ಅಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ ಒತ್ತಾಯಿಸಿ, ವೃದ್ಯಾಪ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಿ, ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿದ್ದನ್ನು ವಿರೋಧಿಸಿ, ವಿದ್ಯುತ್ ದರ ಏರಿಕೆಯನ್ನು ಖಂಡಿಸಿ, ಗೃಹ ನಿರ್ಮಾಣಕ್ಕೆ ಪೂರಕವಾದ ಮರಳು ಹಾಗೂ ಕೆಂಪುಕಲ್ಲು ಸಾಗಾಣಿಕೆ ನಿರ್ಬಂಧ ರದ್ದತಿಗೆ ಆಗ್ರಹಿಸಿ, ಭಾರತೀಯ ಜನತಾ ಪಾರ್ಟಿ ಶಿರ್ಲಾಲು ಗ್ರಾ. ಪಂಚಾಯತ್ ಮುಂದೆ ಜೂ.23ರಂದು ಪ್ರತಿಭಟನೆ ನಡೆಸಿದರು.
ಸದಾಶಿವ ಕರಂಬಾರು ಕಾರ್ಯಕ್ರಮ ನಿರೂಪಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ನವೀನ್ ಕೆ. ಸಾಮಾನೀ, ಪ್ರತಿಭಟನಾ ಕಾರಣ ಉದ್ದೇಶಿಸಿ ಮಾತನಾಡಿದರು. ಮಹಾ ಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಮಾಧವ ಶಿರ್ಲಾಲು, ಪಂಚಾಯತ್ ಅಧ್ಯಕ್ಷೆ ಉಷಾ ಶೆಟ್ಟಿ, ಉಪಾಧ್ಯಕ್ಷ ಸೋಮನಾಥ ಹಾಗೂ ಹಾಲಿನ ಸೊಸೈಟಿ ನಿರ್ದೇಶಕರು, ಸಿ.ಎ ಬ್ಯಾಂಕ್ ನಿರ್ದೇಶಕರು, ಪಾರ್ಟಿ ಎಲ್ಲ ಕಾರ್ಯಕರ್ತರು, ಭೂ ಸಮಿತಿ ಅಧ್ಯಕ್ಷರು, ಶಕ್ತಿ ಕೇಂದ್ರ ಅಧ್ಯಕ್ಷರು, ಶಿರ್ಲಾಲು ಕರಂಬಾರಿನ 150ಕ್ಕೂ ಹೆಚ್ಚು ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದರು.