ಮಚ್ಚಿನ: ಮಂಗಳೂರು ಕೆಮಿಕಲ್ಸ್ ಆಂಡ್ ಫರ್ಟಿಲೈಝರ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಇದರ ಸಿ.ಎಸ್.ಆರ್ ಆಕ್ಟಿವಿಟಿ 2024- 25ರ ಮಂಗಳ ಅಕ್ಷರ ಮಿತ್ರ ಅಂಗನವಾಡಿ ನಿರ್ಮಾಣ ಯೋಜನೆ ಅಡಿಯಲ್ಲಿ 29ಲಕ್ಷ ಅನುದಾನದಲ್ಲಿ ಮಚ್ಚಿನ ಗ್ರಾಮದ ಪಾಲಡ್ಕdಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣಾ ಕಾರ್ಯಕ್ರಮ ಜೂ. 22ರಂದು ನೆರವೇರಿತು.
ಎಂ.ಸಿ.ಎಫ್ ನ ಮುಖ್ಯ ಉತ್ಪಾದನಾಧಿಕಾರಿ ಎಸ್. ಗಿರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೂತನ ಅಂಗನವಾಡಿ ಕೇಂದ್ರವನ್ನು ಲೋಕಾರ್ಪಣೆಗೈದು ಶುಭ ಹಾರೈಸಿದರು.
ಆಟದ ಮೈದಾನದ ಉದ್ಘಾಟನೆಯನ್ನು ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ನೆರವೇರಿಸಿದರು. ಸಭಾ ಕಾರ್ಯಕ್ರಮವನ್ನು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಅನುವಂಶಿಯ ಆಡಳಿತ ಮೊಕ್ತೇಸರ ಹರ್ಷ ಸಂಪಿಗೆತ್ತಾಯ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಗ್ರಾಮೀಣ ಪ್ರದೇಶದ ಬಲ ವರ್ಧನೆಗೆ ಶ್ರಮಿಸುತ್ತಿರುವ ಎಂ.ಸಿ.ಎಫ್ ನ ಕಾರ್ಯಗಳನ್ನು ಶ್ಲಾಘಿಸಿದರು.
ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷೆ ಸೋಮಾವತಿ ಸದಸ್ಯರುಗಳಾದ ಚೇತನ್ ಪಲ್ಲತಲ, ತಾರಾ, ಡೀಕಮ್ಮ, ಎಂ.ಸಿ.ಎಫ್ ನ ಅಧಿಕಾರಿಗಳಾದ ಚೇತನ್ ಮೆಂಡೋನ್ಸ, ಯೋಗಿಶ್, ದೀಕ್ಷಿತ್ ಶೆಟ್ಟಿ, ವಿವೇಕ್ ಕೋಟ್ಯಾನ್, ದಿವಾಕರ್ ಶೆಟ್ಟಿ ಕಂಗೆತ್ತಿಲು ಮನೆ ಎಸ್.ಡಿ.ಎಮ್.ಸಿ ಅಧ್ಯಕ್ಷ, ಕೆ.ಪಿ.ಎಸ್.ಸಿ ಪುಂಜಾಲಕಟ್ಟೆ, ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ವಸಂತ ಮರಕಡ, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಂ.ಸಿ.ಎಫ್ ಸಂಸ್ಥೆಯಿಂದ ಅನುದಾನ ಒದಗಿಸಿಕೊಟ್ಟ ಮುಖ್ಯ ಉತ್ಪಾದನಾಧಿಕಾರಿ ಗಿರೀಶ್, ಮಚ್ಚಿನ ಗ್ರಾಮಕ್ಕೆ ಸುಮಾರು 22ಕೋಟಿಯಷ್ಟು ಅನುದಾನ ಒದಗಿಸಿಕೊಟ್ಟು ಮಚ್ಚಿನ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಕಾರಣಿಕರ್ತ ಶಾಸಕ ಹರೀಶ್ ಪೂಂಜ, ಅಂಗನವಾಡಿಯಲ್ಲಿ ಸುಮಾರು 26 ವರ್ಷಗಳ ಕಾಲ ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶಾರದಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಅನುದಾನ ಒದಗಿಸುವಲ್ಲಿ ಸಹಕರಿಸಿದ ಎಂ.ಸಿ.ಎಫ್ ನ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಗೌರವ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನೂತನ ಅಂಗನವಾಡಿ ಕೇಂದ್ರವನ್ನು ಅತ್ಯುತ್ತಮವಾಗಿ ನಿರ್ಮಾಣ ಮಾಡಿಕೊಟ್ಟ ಗುತ್ತಿಗೆದಾರರಾದ ದಯಾನಂದ್ ಮಂಗಳೂರು ಹಾಗೂ ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ ಸೀಮ್ ಮ್ಯಾಕ್ಸಿಮ್ ಕ್ರಾಸ್ತಾ ಅವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಎಂ.ಸಿ.ಎಫ್ ನಿಂದ ಅಂಗನವಾಡಿ ಕಟ್ಟಡಕ್ಕೆ ಅನುದಾನ ಬರುವಲ್ಲಿ ಶ್ರಮಿಸಿದ ಚಂದ್ರಕಾಂತ್ ನಿಡ್ಡಾಜೆ ಅವರ ಪ್ರಯತ್ನವನ್ನು ಸ್ಮರಿಸಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಮಚ್ಚಿನ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ, ಹಾಲಿ ಸದಸ್ಯ ಚಂದ್ರಕಾಂತ ನಿಡ್ಡಾಜೆ ಸ್ವಾಗತಿಸಿದರು. ಪುಷ್ಪಾವತಿ ಮತ್ತು ಚೇತನ್ ಕಾರ್ಯಕ್ರಮ ನಿರ್ವಹಿಸಿದರು. ಮುಖ್ಯ ಶಿಕ್ಷಕಿ ವೇದಾವತಿ ಧನ್ಯವಾದಗೈದರು.