Site icon Suddi Belthangady

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ಶಕ್ತಿ ಕೇಂದ್ರ ಮಲವಂತಿಗೆ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ

ಮಲವಂತಿಗೆ: ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 2 ವರ್ಷಗಳಾದರೂ ಸುಸೂತ್ರವಾಗಿ ಆಡಳಿತ ನಡೆಸದೆ ಭೂಮಾಫಿಯ, ಪಟ್ಟಭದ್ರ ಹಿತಾಸಕ್ತಿಗಳಿಂದ ಜನರಿಗೆ ಸುಲಭ ರೀತಿಯ ಸೇವೆ ದೊರಕದೆ ಭಷ್ಟಚಾರದ ಕೂಪದಿಂದ ಸ್ರೀ ಸಾಮಾನ್ಯರ ಹಣ ದೋಚಲು ಅವೈಜ್ಞಾನಿಕ ನಿಯಮ ರೂಪಿಸಿ ಅಲೆದಾಟದ ಭಾಗ್ಯ ಒದಗಿಸಿರುವುದನ್ನು ಹಾಗೂ

9/11 ನಿವೇಶನಗಳ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ, ಅಕ್ರಮ ಸಕ್ರಮ ತಿರಸ್ಕರಿಸುವುದನ್ನು ಖಂಡಿಸಿ, ಬಡವರ ಅಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ ಒತ್ತಾಯಿಸಿ, ವೃದ್ಯಾಪ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಿ, ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿದ್ದನ್ನು ವಿರೋಧಿಸಿ, ವಿದ್ಯುತ್ ದರ ಏರಿಕೆಯನ್ನು ಖಂಡಿಸಿ, ಗೃಹ ನಿರ್ಮಾಣಕ್ಕೆ ಪೂರಕವಾದ ಮರಳು ಹಾಗೂ ಕೆಂಪುಕಲ್ಲು ಸಾಗಾಣಿಕೆ ನಿರ್ಬಂಧ ರದ್ದತಿಗೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ಶಕ್ತಿ ಕೇಂದ್ರ ಮಲವಂತಿಗೆ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಜೂ.23ರಂದು ನಡೆಯಿತು.

ಶಕ್ತಿ ಕೇಂದ್ರದ ಅಧ್ಯಕ್ಷ ಮಧುಸೂದನ್ ಮಲ್ಲ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಕಾಶ್ ಜೈನ್ ಅವರು ಮಾತನಾಡಿ ಗ್ರಾಮಮಟ್ಟದ ಸಮಸ್ಯೆ ಕುರಿತು ರಾಜ್ಯ ಸರ್ಕಾರ ಅವ್ಯವಸ್ಥೆ ಬಗ್ಗೆ ಮಾತಾಡಿ ಸರ್ಕಾರ ಸೌಲಭ್ಯ ಗ್ರಾಮ ಮಟ್ಟದಲ್ಲಿ ಗ್ರಾಮಸ್ಥರಿಗೆ ಸಿಗುವ ಮೂಲ ಸೌಕರ್ಯ ವ್ಯವಸ್ಥೆ ಅನುದಾನ ವಿವಿಧ ರೀತಿಯ ಗ್ರಾಮ ಮಟ್ಟದಲ್ಲಿ ಸಿಗುವ ಅನುದಾನ ತಕ್ಷಣ ಒದಗಿಸಬೇಕು. ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರಭಾರಿ ಈಶ್ವರ ಬೈರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಹಾಗೂ ಸದಸ್ಯರು ದಿನೇಶ್ ಡಿ. ಗೌಡ ಕಜಕ್ಕೆ, ಪವಿತ್ರ, ಮಾಜಿ ಸದಸ್ಯರು ಕೇಶವ್ ಎಮ್.ಕೆ., ಬಂಗಾಡಿ ಸಿ.ಎ ಬ್ಯಾಂಕ್ ನಿರ್ದೇಶಕ ಸೀನಪ್ಪ ಗೌಡ, ನೇತ್ರ ಕೊಡಂಗೆ, ಬೂತ್ ಸಮಿತಿ ರಾಧಾಕೃಷ್ಣ ಗೌಡ, ಅಶೋಕ್ ಗೌಡ, ಕಾರ್ಯದರ್ಶಿ ಪುರಂದರ ಗೌಡ, ವಿನಯ್ ಕರಿಯಲು, ಯುವಮೋರ್ಚಾ ಅಧ್ಯಕ್ಷ ಜಯಂತ ಕೊಂಡಾಲು ಹಾಗೂ ಬಿಜೆಪಿ ಪಕ್ಷದ ಹಿರಿಯರ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಾಗೂ ತೀಕ್ಷಿತ್ ಕೆ ಕಲ್ಬೆಟ್ಟು ಸ್ವಾಗತಿಸಿ ವಂದನಾರ್ಪಣೆ ನುಡಿದರು.

Exit mobile version