ನಾರಾವಿ: ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ದ.ಕ ಮತ್ತು ಉಡುಪಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್ ಕಚೇರಿಯ ಮುಂದೆ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ಆ ಪ್ರಯುಕ್ತ ನಾರಾವಿ ಗ್ರಾಮ ಪಂಚಾಯತ್ ನ ಎದುರುಗಡೆ ಬಿಜೆಪಿ ಶಕ್ತಿ ಕೇಂದ್ರ ನಾರಾವಿ ಮತ್ತು ಕುತ್ಲೂರು ವತಿಯಿಂದ ಅಭಿವೃದ್ಧಿ ಶೂನ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಯುವ ವಾಗ್ಮಿ ಸುನಿಲ್ ಪಣಪಿಲ ಭಾಗವಹಿಸಿ ತನ್ನ ದಿಕ್ಸೂಚಿ ಭಾಷಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ವಿವರಿಸಿ ಜನ ವಿರೋಧಿ ನೀತಿಗಳನ್ನು ಖಂಡಿಸಿದರು. ನಂತರ ಜನ ಸಾಮಾನ್ಯರ ಜೀವನದ ಸ್ಥಿತಿ ಗತಿಗಳ ಮೇಲೆ ದುಷ್ಪರಿಣಾಮ ಬೀರುವ ಕಾಂಗ್ರೆಸ್ ಸರ್ಕಾರದ ಕಾರ್ಯ ಯೋಜನೆಗಳನ್ನು ಖಂಡಿಸಿ ಅಭಿವೃದ್ಧಿಪರ ಜನಪರ ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳಬೇಕೆಂದು ಮಾನ್ಯ ರಾಜ್ಯಪಾಲರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೂಲಕ ನಾರಾವಿ ಮತ್ತು ಕುತ್ಲೂರು ಶಕ್ತಿಕೇಂದ್ರ ಅಧ್ಯಕ್ಷರುಗಳು ಮನವಿಯನ್ನು ನೀಡುವ ಮೂಲಕ ಪ್ರತಿಭಟನಾ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.
ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದಯಾನಂದ ಪೂಜಾರಿ, ಕುತ್ಲೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ರಾಜಶ್ರೀ, ಬಿಜೆಪಿ ಮಹಾಶಕ್ತಿ ಕೇಂದ್ರ ನಾರಾವಿಯ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿ ಸದಸ್ಯೆ, ನಾರಾವಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಮಿತ್ರಾ, ಬಿಜೆಪಿ ಬೆಳ್ತಂಗಡಿ ಮಹಿಳಾ ಮೋರ್ಚಾ ಸದಸ್ಯೆ ಆಶಾಲತಾ, ನಾರಾವಿ ಮಹಾಶಕ್ತಿ ಕೇಂದ್ರ ತಂಡದ ಸದಸ್ಯ ವಸಂತ್ ಆಚಾರ್ಯ, ಕುತ್ಲೂರು ಶಕ್ತಿ ಕೇಂದ್ರ ಅಧ್ಯಕ್ಷ ರತ್ನಾಕರ ಬಡೆಕ್ಕಿಲ, ನಾರಾವಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮಂಡಲ ಸಾಮಾಜಿಕ ಜಾಲತಾಣ ಸದಸ್ಯ ಅಜಿತ್ ಕುತ್ಲೂರು ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರುಗಳು, ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳು, ಬೂತ್ ಸಮಿತಿಯ ಪದಾಧಿಕಾರಿಗಳು, ಪಕ್ಷದ ಪ್ರಮುಖ ನಾಯಕರುಗಳು, ಸಂಘ ಪರಿವಾರದ ನಾಯಕರುಗಳು, ಕಾರ್ಯಕರ್ತ ಬಂಧುಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.