ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ

0

ಆರಂಬೋಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯದರ್ಶಿಗಳಾದ ಸುಂದರ್ ಹೆಗ್ಡೆ ಮೂಡುಕೋಡಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವಂತೆ ಆಗ್ರಹಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಜಂತೋಡಿ, ಸದಸ್ಯರಾದ ವಿಜಯ ರಮೇಶ್ ಕುಂಜಾಡಿ, ಸತೀಶ್ ಪಿ. ಮಠ, ಸುರೇಂದ್ರ ಶೆಟ್ಟಿ ಅಜ್ಜಾಡಿ, ಗೀತಾ ಪೂಜಾರಿ, ದೀಕ್ಷಿತ ದೇವಾಡಿಗ, ಬಿಜೆಪಿ ಬೆಳ್ತಂಗಡಿ ಮಂಡಲದ ಎಸ್. ಸಿ. ಮೋರ್ಚಾ ಉಪಾಧ್ಯಕ್ಷ ಸುರೇಶ್ ಎಚ್. ಆರಂಬೋಡಿ ಸೇರಿದಂತೆ ಬಿಜೆಪಿ ಪಕ್ಷದ ಶಕ್ತಿಕೇಂದ್ರ ಅಧ್ಯಕ್ಷರು, ಬೂತ್ ಸಮಿತಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಭಾಗವಹಿಸಿದರು.

LEAVE A REPLY

Please enter your comment!
Please enter your name here