ಕಕ್ಯಪದವು: ಎಲ್. ಸಿ. ಆರ್ ವಿದ್ಯಾ ಸಂಸ್ಥೆಯಲ್ಲಿ 2025 – 26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಪದಾದಿಕಾರಿಗಳ ಆಯ್ಕೆ ಮಾಡಲು ಜೂ. 23ರಂದು ಬೆಳಿಗ್ಗೆ 10.30ಗೆ ಸರಿಯಾಗಿ ಚುನಾವಣೆಯನ್ನು ನಡೆಸಲಾಯಿತು.

ಎಲ್ಲಾ ವಿದ್ಯಾರ್ಥಿಗಳ ಮತದಾನ ಪ್ರಕ್ರಿಯೆಯು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ (EVM) ಯ ಮೂಲಕ ನೆರವೇರಿತು. ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಮತದಾನದ ಕಾರ್ಯ ಚಟುವಟಿಕೆಗಳನ್ನು ಆಧುನಿಕ ಮೊಬೈಲ್ ತಂತ್ರಜ್ಞಾನದ ಮೂಲಕ ಮಾಡಲಾಯಿತು. ವಿವಿಧ ಶಿಕ್ಷಕ ಸಿಬ್ಬಂದಿಗಳ ಸಹಕಾರದಿಂದ ಮತದಾನ ಪ್ರಕ್ರಿಯೆಯು ಶಿಸ್ತಿನಿಂದ ಮತ್ತು
ಯಶಸ್ವಿಯಾಗಿ ಪೂರ್ಣಗೊಂಡಿತು. ಹಾಗೂ ಮತ ಎಣಿಕೆಯನ್ನು ಮಾಡಿ ಫಲಿತಾಂಶ ಘೋಷಣೆಯನ್ನು ಮಾಡಲಾಯಿತು.
ಶಾಲಾ ವಿದ್ಯಾರ್ಥಿ ಸಂಘದ ನಾಯಕಿಯಾಗಿ ಮನಸ್ವಿನಿ ಕೆ., ಉಪನಾಯಕಿಯಾಗಿ ಅದಿತಿ ಎಂ. ಪ್ರಭು ಆಯ್ಕೆಯಾದರು. ಹಾಗೂ ಶಿಕ್ಷಣ, ಸಾಂಸ್ಕೃತಿಕ, ಕ್ರೀಡಾ, ಆರೋಗ್ಯ ಮಂತ್ರಿಗಳನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಹಾಗೂ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂಬುದಾಗಿ ಮುಖ್ಯ ಶಿಕ್ಷಕಿ ವಿಜಯ ಕೆ. ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ ವಿಜೇತರನ್ನು ಅಭಿನಂದಿಸಿದರು.